ಕಳೆದ ವರ್ಷ ನಿಧನ ಹೊಂದಿದ ಬಡಗತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ ಅವರ ಪತ್ನಿ ಶ್ರೀಮತಿ ಸರಸ್ವತಿ ಆಚಾರ್ ಅವರಿಗೆ ಯಕ್ಷಗಾನ ಕಲಾರಂಗದ ವತಿಯಿಂದ ರೂಪಾಯಿ 25 ಸಾವಿರ ನೆರವನ್ನು ನೇಜಾರಿನಲ್ಲಿರುವ ಅವರ ಮನೆಗೆ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ತೆರಳಿ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಅವರು ನೀಡಿದರು.
ಅವರ ಪುತ್ರಿ ಸೀಮಾಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಭರಿಸುತ್ತಿದೆ. ಇದೇ ಸಂದರ್ಭದಲ್ಲಿ ಸೆಲ್ಕೋ ಸಂಸ್ಥೆಯ ವತಿಯಿಂದ ನೀಡಲ್ಪಟ್ಟ ಸೆಲ್ಕೋ ಸೋಲಾರ್ ಹೊಲಿಗೆ ಯಂತ್ರವನ್ನು ಸಂಸ್ಥೆಯ ಎ.ಜಿ.ಎಂ. ಗುರುಪ್ರಕಾಶ್ ಶೆಟ್ಟಿಯವರು ಹಸ್ತಾಂತರಿಸಿದರು.

ಕಲಾರಂಗದ ಪದಾಧಿಕಾರಿಗಳ ತಂಡದಲ್ಲಿ ಉಪಾಧ್ಯಕ್ಷ ಎಸ್.ವಿ.ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಹಾಗೂ ಎಚ್.ಎನ್. ವೆಂಕಟೇಶ್ ಉಪಸ್ಥಿತರಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
