ಸರಕಾರ 6ನೆಯ ತರಗತಿ ಹಾಗೂ ಆರರಿಂದ ಮೇಲಿನ ತರಗತಿಗಳನ್ನು ಮಾತ್ರ ಆರಂಭಿಸಲು ಅನುಮತಿ ನೀಡಿರುವುದರಿಂದ 1ರಿಂದ 5ನೆಯ ತರಗತಿಗಳನ್ನು ನಡೆಸಿದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಎಸ್ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನದ ಪ್ರಕಾರ ಸರಕಾರ 6ನೆಯ ತರಗತಿ ಹಾಗೂ ಆರರಿಂದ ಮೇಲಿನ ತರಗತಿಗಳನ್ನು ಮಾತ್ರ ಆರಂಭಿಸಲು ಅನುಮತಿ ನೀಡಿದೆ. ಆದರೆ ಕೆಲವು ಶಿಕ್ಷಣ ಸಂಸ್ಥೆಗಳು 1ರಿಂದ 5ನೆಯ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿವೆ ಎಂದು ದೂರುಗಳು ಬರುತ್ತಿವೆ.
ಈ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಗಳು ಬರುತ್ತಿವೆ. ಆದುದರಿಂದ ಅಂತಹಾ ಶಾಲೆಗಳ ವಿರುದ್ಧ ಸೂಕ್ತ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
1ರಿಂದ 5ನೆಯ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಸುರೇಶ್ ಕುಮಾರ್ ಅವರು ಇಲಾಖಾ ಆಯುಕ್ತರುಗಳಿಗೆ ಸೂಚಿಸಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

