ಕುರುಡು ಪದವು ಉಪ್ಪಳದ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯು ಪ್ರತಿವರ್ಷದಂತೆ ಈ ಬಾರಿ ಪದ್ಯಾಣದ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಯಕ್ಷಗಾನದ ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದರಾದ ಕುರಿಯ ವಿಠಲ ಶಾಸ್ತ್ರಿ, ನೆಡ್ಲೆ ನರಸಿಂಹ ಭಟ್, ಕರವೋಳು ದೇರಣ್ಣ ಶೆಟ್ಟಿಯವರ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಇತ್ತೀಚೆಗೆ ಸಂಘಟಿಸಿತು.
ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆಯವರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿ, ತೆಂಕು ಬಡಗಿನ ಖ್ಯಾತ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ ಅವರಿಗೆ ಕರೋಳು ದೇರಣ್ಣ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ, ಯಕ್ಷ ಛಾಂದಸ, ಪ್ರಸಂಗ ಕವಿ ಗಣೇಶ ಕೊಲೆಕಾಡಿ ಅವರಿಗೆ ನೆಡ್ಲೆ ನರಸಿಂಹ ಭಟ್ ಸಂಸ್ಮರಣ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು.
ವೇದಮೂರ್ತಿ ಮುಗುಳಿ ತಿರುಮಲೇಶ್ವರ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಕರ್ಣಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ಯೋಗೀಶ್ ರಾವ್ ಚಿಗುರುಪಾದೆ ಸಂಸ್ಮರಣ ಭಾಷಣ ಮಾಡಿದರು. ನಿವೃತ್ತ ಪ್ರಾಧ್ಯಾಪಕ, ತಾಳಮದ್ದಳೆ ಅರ್ಥಧಾರಿ ಜಿ. ಕೆ. ಭಟ್ ಸೇರಾಜೆ ಅಭಿನಂದನಾ ಮಾತುಗಳನ್ನಾಡಿದರು.ಸತೀಶ್ ಆಳ್ವ ಇರಾ, ಸೇರಾಜೆ ಸತ್ಯನಾರಾಯಣ ಭಟ್ ಶುಭಾಶಂಸನೆಗೈದರು. ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ, ಸಾಹಿತಿ ಜನಾರ್ದನ ಹಂದೆ ಮಂಗಳೂರು ಉಪಸ್ಥಿತರಿದ್ದರು.
ಕುರಿಯ ಗೋಪಾಲಕೃಷ್ಣ ಶಾಸ್ತ್ರಿ ಸ್ವಾಗತಿಸಿದರು. ಸೇರಾಜೆ ಶ್ರೀನಿವಾಸ ಭಟ್ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಮೊದಲು ವಿದ್ಯಾ ಜಯರಾಂ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಮತ್ತು ಬಳಿಕ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಲಲಿತ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

