ಶ್ರೀ ಮಹಾಲಕ್ಷ್ಮಿ ಭಜನಾ ಮಂದಿರ, ದೊಡ್ಡಡ್ಕ ಇದರ 28 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳಿಗ್ಗೆ ಗಣಪತಿ ಹವನ, ಮಹಾಲಕ್ಷ್ಮಿ ಪೂಜೆ, ಶ್ರೀ ನರಹರಿ ಭಟ್ ಪಾಲೆಚ್ಚಾರು ಇವರಿಂದ ಕಥಾವಾಚನ , ಮಹಾಪೂಜೆ, ಅನ್ನಸಂತರ್ಪಣೆ ,ಭಜನಾ ಕಾರ್ಯಗಳು ನಡೆದವು.
ಧಾರ್ಮಿಕ ಸಭಾ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ನಿವೃತ್ತ ಅಧ್ಯಾಪಕ ಶ್ರೀ ನರಹರಿ ಭಟ್ ಪಾಲೆಚ್ಚಾರು ವಹಿಸಿದ್ದರು. ಅತಿಥಿಗಳಾಗಿ ನ್ಯಾಯವಾದಿ ಶ್ರೀ ಚೇತನ್ ನಾಯಕ್ ಸಾಮೇತಡ್ಕ, ಸಂಚಾರಿ ಪೊಲೀಸ್ ಉಪ-ನಿರೀಕ್ಷಕರಾದ ಶ್ರೀ ರಾಮ ನಾಯ್ಕ ಗೆಣಸಿನಕುಮೇರು,
ಉಪಸ್ಥಿತರಿದ್ದರು.
ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಜಗದೀಶ್ ಭಂಡಾರಿ, ಗೆಣಸಿನ ಕುಮೇರು ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ವೆಂಕಟಕೃಷ್ಣ ಭಟ್ ವರದಿ ವಾಚಿಸಿ , ಲೆಕ್ಕಪತ್ರ ಮಂಡಿಸಿದರು. ಮಂದಿರದ ಸೇವಾಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಸೇಸಪ್ಪ ನಾಯ್ಕ್ ವಂದನಾರ್ಪಣೆಗೈದರು.

ಆ ಬಳಿಕ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ‘ಓಂ ನಮಃ ಶಿವಾಯ, ರಕ್ತರಾತ್ರಿ’ ಎಂಬ ಯಕ್ಷಗಾನ ಬಯಲಾಟ ಜರಗಿತು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
