Saturday, May 18, 2024
Homeಯಕ್ಷಗಾನಮೇ 7ಕ್ಕೆ ಕರ್ನಾಟಕ ಯಕ್ಷಭಾರತಿಯಿಂದ 'ರಾಜಾ ದಿಲೀಪ' ಬಾನುಲಿ ಯಕ್ಷಗಾನ

ಮೇ 7ಕ್ಕೆ ಕರ್ನಾಟಕ ಯಕ್ಷಭಾರತಿಯಿಂದ ‘ರಾಜಾ ದಿಲೀಪ’ ಬಾನುಲಿ ಯಕ್ಷಗಾನ

ಆಕಾಶವಾಣಿ ಮಂಗಳೂರು ನಿಲಯದಿಂದ ಪ್ರತಿ ಶುಕ್ರವಾರ  ಪ್ರಸಾರವಾಗುವ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದಲ್ಲಿ ಈ ವಾರ ಕರ್ನಾಟಕ ಯಕ್ಷ ಭಾರತಿ ಬೆಟ್ಟಂಪಾಡಿ, ಪುತ್ತೂರು ತಂಡವು ‘ರಾಜಾ ದಿಲೀಪ’ ಎಂಬ ಯಕ್ಷಗಾನ ಪ್ರಸಂಗವನ್ನು ಪ್ರಸ್ತುತ ಪಡಿಸಲಿದೆ‌. ಈ ಕಾರ್ಯಕ್ರಮ ಇದೇ ಮೇ.7 ಶುಕ್ರವಾರ ರಾತ್ರಿ 9.30 ಕ್ಕೆ ಬಾನುಲಿಯಲ್ಲಿ ಪ್ರಸಾರವಾಗುವುದು.   

ದೇವಲೋಕದ ಕಾಮಧೇನುವನ್ನು ನಿರ್ಲಕ್ಷಿಸಿದ ಕಾರಣದಿಂದ ಸಂತಾನ ಹೀನನಾದ  ಸೂರ್ಯವಂಶದ ಚಕ್ರವರ್ತಿ ದಿಲೀಪ ಮಹಾರಾಜ ವಶಿಷ್ಠಾಶ್ರಮದಲ್ಲಿ ಗೋಪೂಜೆ ಮಾಡಿದ ಫಲ ರೂಪವಾಗಿ ಕುಲದೀಪಕನಾದ ರಘುವನ್ನು ಮಗನಾಗಿ ಪಡೆಯುವ ವಿಶಿಷ್ಟ ಕಥಾ ಹಂದರದ ‘ರಾಜಾ ದಿಲೀಪ’ ಯಕ್ಷಗಾನದಲ್ಲಿ ಹೆಸರಾಂತ ಕಲಾವಿದರಾದ ಭಾಸ್ಕರ ರೈ ಕುಕ್ಕುವಳ್ಳಿ (ದಿಲೀಪ), ಎಂ.ಕೆ. ರಮೇಶಾಚಾರ್ಯ (ನಂದಿನಿ), ಗಣರಾಜ ಕುಂಬಳೆ (ರುಧಿರಾಕ್ಷ), ರಮೇಶ್ ಸಾಲ್ವಣ್ಕರ್ (ವಶಿಷ್ಠ), ಮತ್ತು ಉಮೇಶ ಗೇರುಕಟ್ಟೆ (ಸುದಕ್ಷಿಣೆ) ಅರ್ಥಧಾರಿಗಳಾಗಿ ಭಾಗವಹಿಸಿದ್ದಾರೆ.     

ಕಾರ್ಯಕ್ರಮದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಪದ್ಯಾಣ ಗಣಪತಿ ಭಟ್ ಅವರ ಹಾಡುಗಾರಿಕೆಗೆ ಪಿ.ಟಿ ಜಯರಾಮ ಭಟ್, ಕೋಳ್ಯೂರು ಭಾಸ್ಕರ ಮತ್ತು ಹರಿಶ್ಚಂದ್ರ ಮಾಡೂರು ಅವರ ಹಿಮ್ಮೇಳವಿದೆ. ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ಮಾಪಕ ಸೂರ್ಯನಾರಾಯಣ ಭಟ್ ಪಿ.ಎಸ್. ಇದನ್ನು ಧ್ವನಿಮುದ್ರಿಸಿ ಪ್ರಸಾರಕ್ಕೆ ಅಳವಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments