ಆಕಾಶವಾಣಿ ಮಂಗಳೂರು ನಿಲಯದಿಂದ ಪ್ರತಿ ಶುಕ್ರವಾರ ಪ್ರಸಾರವಾಗುವ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದಲ್ಲಿ ಈ ವಾರ ಕರ್ನಾಟಕ ಯಕ್ಷ ಭಾರತಿ ಬೆಟ್ಟಂಪಾಡಿ, ಪುತ್ತೂರು ತಂಡವು ‘ರಾಜಾ ದಿಲೀಪ’ ಎಂಬ ಯಕ್ಷಗಾನ ಪ್ರಸಂಗವನ್ನು ಪ್ರಸ್ತುತ ಪಡಿಸಲಿದೆ. ಈ ಕಾರ್ಯಕ್ರಮ ಇದೇ ಮೇ.7 ಶುಕ್ರವಾರ ರಾತ್ರಿ 9.30 ಕ್ಕೆ ಬಾನುಲಿಯಲ್ಲಿ ಪ್ರಸಾರವಾಗುವುದು.
ದೇವಲೋಕದ ಕಾಮಧೇನುವನ್ನು ನಿರ್ಲಕ್ಷಿಸಿದ ಕಾರಣದಿಂದ ಸಂತಾನ ಹೀನನಾದ ಸೂರ್ಯವಂಶದ ಚಕ್ರವರ್ತಿ ದಿಲೀಪ ಮಹಾರಾಜ ವಶಿಷ್ಠಾಶ್ರಮದಲ್ಲಿ ಗೋಪೂಜೆ ಮಾಡಿದ ಫಲ ರೂಪವಾಗಿ ಕುಲದೀಪಕನಾದ ರಘುವನ್ನು ಮಗನಾಗಿ ಪಡೆಯುವ ವಿಶಿಷ್ಟ ಕಥಾ ಹಂದರದ ‘ರಾಜಾ ದಿಲೀಪ’ ಯಕ್ಷಗಾನದಲ್ಲಿ ಹೆಸರಾಂತ ಕಲಾವಿದರಾದ ಭಾಸ್ಕರ ರೈ ಕುಕ್ಕುವಳ್ಳಿ (ದಿಲೀಪ), ಎಂ.ಕೆ. ರಮೇಶಾಚಾರ್ಯ (ನಂದಿನಿ), ಗಣರಾಜ ಕುಂಬಳೆ (ರುಧಿರಾಕ್ಷ), ರಮೇಶ್ ಸಾಲ್ವಣ್ಕರ್ (ವಶಿಷ್ಠ), ಮತ್ತು ಉಮೇಶ ಗೇರುಕಟ್ಟೆ (ಸುದಕ್ಷಿಣೆ) ಅರ್ಥಧಾರಿಗಳಾಗಿ ಭಾಗವಹಿಸಿದ್ದಾರೆ.
ಕಾರ್ಯಕ್ರಮದಲ್ಲಿ ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಪದ್ಯಾಣ ಗಣಪತಿ ಭಟ್ ಅವರ ಹಾಡುಗಾರಿಕೆಗೆ ಪಿ.ಟಿ ಜಯರಾಮ ಭಟ್, ಕೋಳ್ಯೂರು ಭಾಸ್ಕರ ಮತ್ತು ಹರಿಶ್ಚಂದ್ರ ಮಾಡೂರು ಅವರ ಹಿಮ್ಮೇಳವಿದೆ. ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ಮಾಪಕ ಸೂರ್ಯನಾರಾಯಣ ಭಟ್ ಪಿ.ಎಸ್. ಇದನ್ನು ಧ್ವನಿಮುದ್ರಿಸಿ ಪ್ರಸಾರಕ್ಕೆ ಅಳವಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
