ಯುಕೋ ಬ್ಯಾಂಕ್ ಮಂಗಳೂರು ಶಾಖೆಯಲ್ಲಿ ಉದ್ಯೋಗಿಯಾಗಿದ್ದು ಸ್ವಯಂ ನಿವೃತ್ತಿ ಹೊಂದಿದ್ದ, ಹವ್ಯಾಸಿ ಯಕ್ಷಗಾನ ಅರ್ಥಧಾರಿ ಮತ್ತು ಸಂಘಟಕ ಪಿ.ಕೆ.ನಾಯ್ಕ ಶಿರೋಳ್ತಳಿಕೆ (64 ವ.) ಅಲ್ಪ ಕಾಲದ ಅಸೌಖ್ಯದಿಂದ ಮೇ. 18 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ನರ ಸಂಬಂಧಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೋವಿಡ್ ಪೊಸಿಟಿವ್ ಬಂದಿತ್ತು. ಮೂಲತಃ ನೆಲ್ಯಾಡಿ ಬಳಿ ಆಲಂತಾಯ ಗ್ರಾಮದ ಶಿರೋಳ್ತಳಿಕೆಯಲ್ಲಿ ನೆಲೆಸಿದ್ದ ಕೃಷ್ಣಪ್ಪ ನಾಯ್ಕರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದ ಪಿ.ಕೆ.ನಾಯ್ಕರ ಅಕಾಲಿಕ ನಿಧನಕ್ಕೆ ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಸಂತಾಪ ವ್ಯಕ್ತಪಡಿಸಿದೆ. ‘ಮಂಗಳೂರು ಗೊಲ್ಲರಕೇರಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಯಕ್ಷಗಾನ ಸಂಘದಲ್ಲಿ ಸ್ವಂತ ಆಸಕ್ತಿಯಿಂದ ಅರ್ಥಗಾರಿಕೆಯನ್ನು ಆರಂಭಿಸಿದ್ದ ಪಿ.ಕೆ.ನಾಯ್ಕರು ಮುಂದೆ ಹವ್ಯಾಸಿಗಳ ಆಟ – ಕೂಟಗಳಲ್ಲಿ ಕಲಾವಿದರಾಗಿ ಪಾಲ್ಗೊಂಡಿದ್ದರು. ತಮ್ಮ ಊರಲ್ಲೂ ಯಕ್ಷಗಾನ ಕಾರ್ಯಕ್ರಮಗಳನ್ನು ಸಂಘಟಿಸಿ ಹಲವು ಹಿರಿಯ ಕಲಾವಿದರ ಸಂಪರ್ಕ ಗಳಿಸಿಕೊಂಡರು. 2017 ರಲ್ಲಿ ಯಕ್ಷಾಂಗಣದ ತಾಳಮದ್ದಳೆ ಸಪ್ತಾಹದಲ್ಲಿಯೂ ಭಾಗವಹಿಸಿದ್ದ ಅವರು ಆಕಾಶವಾಣಿ ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ತಮ್ಮೊಂದಿಗೆ ಜತೆಗಿದ್ದರು’ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
