Friday, September 20, 2024
Homeಸುದ್ದಿಗಡಿನಾಡ ಯಕ್ಷಗಾನ ಕಲಾವಿದರು ಕರ್ನಾಟಕದಿಂದ ಸಹಾಯಧನ ಕೇಳಿದರೆ ತಪ್ಪೇ?

ಗಡಿನಾಡ ಯಕ್ಷಗಾನ ಕಲಾವಿದರು ಕರ್ನಾಟಕದಿಂದ ಸಹಾಯಧನ ಕೇಳಿದರೆ ತಪ್ಪೇ?

ಇತ್ತೀಚೆಗೆ ಕರ್ನಾಟಕ ಸರಕಾರ ಕೊರೋನಾ ಸಂಕಷ್ಟದ ನಿಮಿತ್ತ ಯಕ್ಷಗಾನ ಕಲಾವಿದರಿಗೆ ಸಹಾಯಧನ ನೀಡುವ ಭರವಸೆ ನೀಡಿ ಆ ಸಲುವಾಗಿ ಕಲಾವಿದರು ಅರ್ಜಿ ಸಲ್ಲಿಸುವಂತೆ ತಿಳಿಸಿತ್ತು. ಅರ್ಜಿ ಸಲ್ಲಿಸುವ ಹಾಗೂ ಅದರ ಮುಂದಿನ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದೆ. ಈ ನಡುವೆ ಗಡಿನಾಡು ಕಾಸರಗೋಡಿನ ಕಲಾವಿದರು ತಮ್ಮನ್ನೂ ಕರ್ನಾಟಕದ ಈ ಸವಲತ್ತಿನ ವ್ಯಾಪ್ತಿಯೊಳಗೆ ತರಬೇಕೆಂಬ ಮನವಿ ಸಲ್ಲಿಸಿದ್ದಾರೆ. ಯಾಕೆಂದರೆ ಹೆಚ್ಚಿನ ಗಡಿನಾಡಿನ ಯಕ್ಷಗಾನ ಕಲಾವಿದರೂ ಕಲಾಸೇವೆ ಮಾಡುತ್ತಿರುವುದು ಕರ್ನಾಟಕದ ಪ್ರದೇಶಗಳಲ್ಲಿ ಮತ್ತು ಕರ್ನಾಟಕ ರಾಜ್ಯಕ್ಕೆ ಸಂಬಂಧಪಟ್ಟ ಮೇಳಗಳಲ್ಲಿ. ಆದುದರಿಂದ ಅವರ ಈ ಕೇಳಿಕೆ ಸಾಧುವಾದುದೇ ಆಗಿರುತ್ತದೆ. 

1. ಹೆಚ್ಚಿನ ಕಲಾವಿದರು ಕಲಾಸೇವೆ ಮಾಡುತ್ತಿರುವುದು ಕರ್ನಾಟಕದಲ್ಲಿ. 

2. ಬಹುತೇಕ ಕಲಾವಿದರು ದುಡಿಯುತ್ತಿರುವ ಮೇಳಗಳು ಕರ್ನಾಟಕ ರಾಜ್ಯಕ್ಕೆ ಸೇರಿದವುಗಳು. 

3. ಅಂತಹಾ ಮೇಳಗಳ ಮಾಲಕತ್ವವೂ ಕರ್ನಾಟಕ ರಾಜ್ಯದ ಮಹನೀಯರಿಗೆ ಸೇರಿದುದಾಗಿದೆ.  

ಆದುದರಿಂದ ಕಾಸರಗೋಡಿನ ಕಲಾವಿದರು ಈ ಸಹಾಯಧನವನ್ನು ಅಪೇಕ್ಷೆಪಟ್ಟರೆ ಅದು ಅನುಚಿತವಾಗಲಾರದು. ಬದಲಾಗಿ ಈ ಸಂಕಷ್ಟ ಸಮಯದಲ್ಲಿ ಉಚಿತವೂ ಸಾಧುವೂ ಆಗಿರುತ್ತದೆ ಎಂದು ಕಲಾವಿದರ ಹಾಗೂ ಯಕ್ಷಾಭಿಮಾನಿಗಳ ಅಭಿಪ್ರಾಯವಾಗಿದೆ. 

RELATED ARTICLES

Most Popular

Recent Comments