ಇತ್ತೀಚೆಗೆ ಕರ್ನಾಟಕ ಸರಕಾರ ಕೊರೋನಾ ಸಂಕಷ್ಟದ ನಿಮಿತ್ತ ಯಕ್ಷಗಾನ ಕಲಾವಿದರಿಗೆ ಸಹಾಯಧನ ನೀಡುವ ಭರವಸೆ ನೀಡಿ ಆ ಸಲುವಾಗಿ ಕಲಾವಿದರು ಅರ್ಜಿ ಸಲ್ಲಿಸುವಂತೆ ತಿಳಿಸಿತ್ತು. ಅರ್ಜಿ ಸಲ್ಲಿಸುವ ಹಾಗೂ ಅದರ ಮುಂದಿನ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದೆ. ಈ ನಡುವೆ ಗಡಿನಾಡು ಕಾಸರಗೋಡಿನ ಕಲಾವಿದರು ತಮ್ಮನ್ನೂ ಕರ್ನಾಟಕದ ಈ ಸವಲತ್ತಿನ ವ್ಯಾಪ್ತಿಯೊಳಗೆ ತರಬೇಕೆಂಬ ಮನವಿ ಸಲ್ಲಿಸಿದ್ದಾರೆ. ಯಾಕೆಂದರೆ ಹೆಚ್ಚಿನ ಗಡಿನಾಡಿನ ಯಕ್ಷಗಾನ ಕಲಾವಿದರೂ ಕಲಾಸೇವೆ ಮಾಡುತ್ತಿರುವುದು ಕರ್ನಾಟಕದ ಪ್ರದೇಶಗಳಲ್ಲಿ ಮತ್ತು ಕರ್ನಾಟಕ ರಾಜ್ಯಕ್ಕೆ ಸಂಬಂಧಪಟ್ಟ ಮೇಳಗಳಲ್ಲಿ. ಆದುದರಿಂದ ಅವರ ಈ ಕೇಳಿಕೆ ಸಾಧುವಾದುದೇ ಆಗಿರುತ್ತದೆ.
1. ಹೆಚ್ಚಿನ ಕಲಾವಿದರು ಕಲಾಸೇವೆ ಮಾಡುತ್ತಿರುವುದು ಕರ್ನಾಟಕದಲ್ಲಿ.
2. ಬಹುತೇಕ ಕಲಾವಿದರು ದುಡಿಯುತ್ತಿರುವ ಮೇಳಗಳು ಕರ್ನಾಟಕ ರಾಜ್ಯಕ್ಕೆ ಸೇರಿದವುಗಳು.
3. ಅಂತಹಾ ಮೇಳಗಳ ಮಾಲಕತ್ವವೂ ಕರ್ನಾಟಕ ರಾಜ್ಯದ ಮಹನೀಯರಿಗೆ ಸೇರಿದುದಾಗಿದೆ.
ಆದುದರಿಂದ ಕಾಸರಗೋಡಿನ ಕಲಾವಿದರು ಈ ಸಹಾಯಧನವನ್ನು ಅಪೇಕ್ಷೆಪಟ್ಟರೆ ಅದು ಅನುಚಿತವಾಗಲಾರದು. ಬದಲಾಗಿ ಈ ಸಂಕಷ್ಟ ಸಮಯದಲ್ಲಿ ಉಚಿತವೂ ಸಾಧುವೂ ಆಗಿರುತ್ತದೆ ಎಂದು ಕಲಾವಿದರ ಹಾಗೂ ಯಕ್ಷಾಭಿಮಾನಿಗಳ ಅಭಿಪ್ರಾಯವಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ