Saturday, October 5, 2024
Homeಸುದ್ದಿಕಲಾಪೋಷಕ ಕುಕ್ಕಿಕಟ್ಟೆ ಸುರೇಶ್ ನಿಧನ

ಕಲಾಪೋಷಕ ಕುಕ್ಕಿಕಟ್ಟೆ ಸುರೇಶ್ ನಿಧನ

ಕುಕ್ಕಿಕಟ್ಟೆಯ ನಿವಾಸಿ ಶ್ರೀಕಲಾ ವಾಣಿಜ್ಯ ಸಂಕೀರ್ಣದ ಮಾಲಕರಾದ ಸುರೇಶ್ (50 ವರ್ಷ) 22-06-2021ರಂದು ನಿಧನರಾದರು. ‘ಭ್ರಮರ’ ಕಾಂಟೀನ್ ನಡೆಸುತ್ತಾ ಪಾರಂಪರಿಕ ತಿಂಡಿ-ತಿನಿಸುಗಳನ್ನು ಮಾಡುವಲ್ಲಿ ವಿಶೇಷ ಪ್ರಾವೀಣ್ಯತೆಯನ್ನು ಹೊಂದಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸ್ವಂತ ವೇಷಭೂಷಣ ಸಹಿತ ‘ಶ್ರೀಕಲಾ ಸಂಗಮ ಯಕ್ಷಗಾನ ಮಕ್ಕಳ ಮೇಳ’ವನ್ನು ಸ್ಥಾಪಿಸಿ ಎಳೆಯ ಮಕ್ಕಳಲ್ಲಿ ಯಕ್ಷಗಾನಾಸಕ್ತಿ ಮೂಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

ಯಕ್ಷಗಾನ ಕಲೆಯನ್ನುಅತೀವ ಪ್ರೀತಿಸುತ್ತಿದ್ದ ಇವರು ಪ್ರತಿವರ್ಷ ವಿಶೇಷ ರೀತಿಯಲ್ಲಿ ಮೇಳದ ಯಕ್ಷಗಾನವನ್ನುಆಯೋಜಿಸುತ್ತಾ, ಅಂದು ಹಲವಾರು ಅಶಕ್ತರಿಗೆ, ಕಲಾವಿದರಿಗೆ, ಸಂಘ ಸಂಸ್ಥೆಗಳಿಗೆ, ಯಕ್ಷಗಾನ ಮಂಡಳಿಗಳಿಗೆಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹಿಸುತ್ತಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments