ಕುಕ್ಕಿಕಟ್ಟೆಯ ನಿವಾಸಿ ಶ್ರೀಕಲಾ ವಾಣಿಜ್ಯ ಸಂಕೀರ್ಣದ ಮಾಲಕರಾದ ಸುರೇಶ್ (50 ವರ್ಷ) 22-06-2021ರಂದು ನಿಧನರಾದರು. ‘ಭ್ರಮರ’ ಕಾಂಟೀನ್ ನಡೆಸುತ್ತಾ ಪಾರಂಪರಿಕ ತಿಂಡಿ-ತಿನಿಸುಗಳನ್ನು ಮಾಡುವಲ್ಲಿ ವಿಶೇಷ ಪ್ರಾವೀಣ್ಯತೆಯನ್ನು ಹೊಂದಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸ್ವಂತ ವೇಷಭೂಷಣ ಸಹಿತ ‘ಶ್ರೀಕಲಾ ಸಂಗಮ ಯಕ್ಷಗಾನ ಮಕ್ಕಳ ಮೇಳ’ವನ್ನು ಸ್ಥಾಪಿಸಿ ಎಳೆಯ ಮಕ್ಕಳಲ್ಲಿ ಯಕ್ಷಗಾನಾಸಕ್ತಿ ಮೂಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.
ಯಕ್ಷಗಾನ ಕಲೆಯನ್ನುಅತೀವ ಪ್ರೀತಿಸುತ್ತಿದ್ದ ಇವರು ಪ್ರತಿವರ್ಷ ವಿಶೇಷ ರೀತಿಯಲ್ಲಿ ಮೇಳದ ಯಕ್ಷಗಾನವನ್ನುಆಯೋಜಿಸುತ್ತಾ, ಅಂದು ಹಲವಾರು ಅಶಕ್ತರಿಗೆ, ಕಲಾವಿದರಿಗೆ, ಸಂಘ ಸಂಸ್ಥೆಗಳಿಗೆ, ಯಕ್ಷಗಾನ ಮಂಡಳಿಗಳಿಗೆಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹಿಸುತ್ತಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
