ಬಡಗುತಿಟ್ಟಿನ ಹಿರಿಯ ಭಾಗವತರಾದ ಮತ್ಯಾಡಿ ನರಸಿಂಹ ಶೆಟ್ಟಿ (95 ವರ್ಷ) ನಿನ್ನೆ (10-07-2021) ಕುಂದಾಪುರದ ಮತ್ಯಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ದೀರ್ಘಕಾಲ ಮಂದಾರ್ತಿ ಮೇಳದಲ್ಲಿ ಕಲಾಸೇವೆಗೈದ ಇವರು ಕೊಡವೂರು, ಪೆರ್ಡೂರು, ಅಮೃತೇಶ್ವರೀ, ಮಂದಾರ್ತಿ, ಮಾರಣಕಟ್ಟೆ ಹಾಗೂ ಕಳುವಾಡಿ ಮೇಳಗಳಲ್ಲಿ ಒಟ್ಟು ಸುಮಾರು 45 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಯಕ್ಷಗಾನ ಭಾಗವತರಾಗಿದ್ದ ಇವರಿಗೆ 40ಕ್ಕೂ ಹೆಚ್ಚು ಪೌರಾಣಿಕ ಪ್ರಸಂಗಗಳು ಕಂಠಸ್ಥವಾಗಿದ್ದವು.
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಯಕ್ಷಗಾನ ಕಲಾರಂಗವು ಭಾಗವತ ನಾರ್ಣಪ್ಪ ಉಪ್ಪೂರರ ಸ್ಮರಣಾರ್ಥ ಪ್ರಥಮ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಮೃತರು ಮೂರು ಹೆಣ್ಣು ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
