ಬಡಗುತಿಟ್ಟಿನ ಹಿರಿಯ ಭಾಗವತರಾದ ಮತ್ಯಾಡಿ ನರಸಿಂಹ ಶೆಟ್ಟಿ (95 ವರ್ಷ) ನಿನ್ನೆ (10-07-2021) ಕುಂದಾಪುರದ ಮತ್ಯಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ದೀರ್ಘಕಾಲ ಮಂದಾರ್ತಿ ಮೇಳದಲ್ಲಿ ಕಲಾಸೇವೆಗೈದ ಇವರು ಕೊಡವೂರು, ಪೆರ್ಡೂರು, ಅಮೃತೇಶ್ವರೀ, ಮಂದಾರ್ತಿ, ಮಾರಣಕಟ್ಟೆ ಹಾಗೂ ಕಳುವಾಡಿ ಮೇಳಗಳಲ್ಲಿ ಒಟ್ಟು ಸುಮಾರು 45 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಯಕ್ಷಗಾನ ಭಾಗವತರಾಗಿದ್ದ ಇವರಿಗೆ 40ಕ್ಕೂ ಹೆಚ್ಚು ಪೌರಾಣಿಕ ಪ್ರಸಂಗಗಳು ಕಂಠಸ್ಥವಾಗಿದ್ದವು.
ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಯಕ್ಷಗಾನ ಕಲಾರಂಗವು ಭಾಗವತ ನಾರ್ಣಪ್ಪ ಉಪ್ಪೂರರ ಸ್ಮರಣಾರ್ಥ ಪ್ರಥಮ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಮೃತರು ಮೂರು ಹೆಣ್ಣು ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
