ಯಕ್ಷಗಾನ ಕಲಾರಂಗದಿಂದ ಆಯ್ದ ಮೇಳಗಳ 409 ಕಲಾವಿದರಿಗೆ ರೂ.1022500/-ವಿತರಣಾ ಕಾರ್ಯಕ್ರಮ ಸಂಸ್ಥೆಯ ಕಛೇರಿಯಲ್ಲಿ ಜರಗಿತು. ಶಾಸಕರಾದ ಕೆ.ರಘುಪತಿ ಭಟ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕಲಾರಂಗವು ಸಮಾಜದ ವಿಶ್ವಾಸಾರ್ಹತೆಯನ್ನು ಸಂಪಾದಿಸಿದ್ದು ಸಂಸ್ಥೆಯ ಚಟುವಟಿಕೆಯೊಂದಿಗೆ ತಾನು ಸದಾ ಕೈ ಜೋಡಿಸುತ್ತೇನೆ ಎಂದು ನುಡಿದರು.
ಸಮಾರಂಭದ ಅಭ್ಯಾಗತರಾಗಿ ಭಾಗವಹಿಸಿದ್ದ ಪಣಂಬೂರು ವಾಸುದೇವ ಐತಾಳರು ಸಂಸ್ಥೆ ಬಹುಮುಖಿಯಾಗಿ ಕೆಲಸ ಮಾಡುತ್ತಿದೆ. ಕಳೆದ 20 ವರ್ಷಗಳಿಂದ ಈ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ನೋಡಿ ಬೆರಗಾಗಿದ್ದೇನೆ ಎಂದರು. ಸಿ.ಎ. ಗಣೆಶ್ ಕಾಂಚನ್ ಅವರು ಅಭ್ಯಾಗತರಾಗಿ ಉಪಸ್ಥಿತರಿದ್ದರು.
ಸಾಂಕೇತಿಕವಾಗಿ ಸಾಲಿಗ್ರಾಮ ಮೇಳದ ಸ್ತ್ರೀ ವೇಷಧಾರಿ ಶಶಿಕಾಂತ ಶೆಟ್ಟಿ, ಬಪ್ಪನಾಡು ಮೇಳದ ಭಾಗವತ ಗಣೇಶ್ಕುಮಾರ್ ಹೆಬ್ರಿ, ಯಕ್ಷಶಿಕ್ಷಣದ ಗುರುಕೃಷ್ಣಮೂರ್ತಿ ಭಟ್ ಬಗ್ವಾಡಿಯವರಿಗೆ ಸಹಾಯಧನದ ಚೆಕ್ ವಿತರಿಸಲಾಯಿತು. ಚೆಕ್ ಸ್ವೀಕರಿಸಿದ ಕಲಾವಿದರು ಸಂಸ್ಥೆ ಕಲಾವಿದರ ಕುರಿತು ನಿರಂತರ ಮಾಡುತ್ತಾ ಬಂದ ಹಲವು ಕಾರ್ಯಕ್ರಮಗಳನ್ನು ಸ್ಮರಿಸಿಕೊಂಡರು. ಉಳಿದ ಕಲಾವಿದರಿಗೆ ನೆಫ್ಟ್ ಮೂಲಕ ಅವರ ಖಾತೆಗೆ ತಲಾ ರೂ.2500/- ರಂತೆ ವರ್ಗಾಯಿಸಲಾಯಿತು.

ಅಧ್ಯಕ್ಷ ಎಂ. ಗಂಗಾಧರರಾವ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಎಸ್. ವಿ.ಭಟ್, ವಿ.ಜಿ. ಶೆಟ್ಟಿ ಕೋಶಾಧಿಕಾರಿ ಮನೋಹರ್ ಕೆ. ಅಭ್ಯಾಗತರಿಗೆ ಶಾಲು ಹೊದೆಸಿ ಗೌರವಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಗೆ ದಾನಿಗಳ ನಿರಂತರ ಪ್ರೋತ್ಸಾಹವನ್ನು ಮತ್ತು ಈ ಯೋಜನೆಗೆ ನೆರವು ನೀಡಿ ಸಹಕರಿಸಿದವರನ್ನು ಸ್ಮರಿಸಿ ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ವಂದಿಸಿದರು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

