ಬೆಂಗಳೂರಿನ ರೋಟರಿ ಕ್ಲಬ್ ನವರು ಆಯೋಜಿಸಿದ್ದ ೨೦೨೦-೨೧ ರ ಸಾಲಿನ ಗುರುದಕ್ಷಿಣೆ ಪ್ರಶಸ್ತಿಯನ್ನು ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆಯ ಕಲಾಗುಡಿಯಲ್ಲಿ ಈ ಒಂದು ಪ್ರಶಸ್ತಿಗೆ ಭಾಜನರಾದ ಯಕ್ಷಗಾನ, ರಂಗಭೂಮಿ,ಹಿರಿ ಹಾಗೂ ಕಿರುತೆರೆ ಕಲಾವಿದರಾದ ಡಾ.ರಾಧಾಕೃಷ್ಣ ಉರಾಳರಿಗೆ ಪ್ರದಾನ ಮಾಡಲಾಯಿತು. ರೋಟರಿ ಕ್ಲಬ್ ನ ಸದಸ್ಯ್ರರಾದ ಶಂಕರನಾರಾಯಣರವರು ಈ ಒಂದು ಪ್ರಶಸ್ತಿಯನ್ನು ಡಾ.ರಾಧಾಕೃಷ್ಣ ಉರಾಳರಿಗೆ ಪ್ರದಾನ ಮಾಡಿದರು. ಕಲಾಕದಂಬ ಆರ್ಟ್ ಸೆಂಟರ್ ಎಂಬ ಸಂಸ್ಥೆಯ ಮೂಲಕ ಡಾ.ರಾಧಾಕೃಷ್ಣ ಉರಾಳರವರು ಯಕ್ಷಗಾನ ಹೆಜ್ಜೆಗಳ ಕಲಿಸುವ ಹಾಗೂ ರಂಗಭೂಮಿ ಚಟುವಟಿಕಗಳನ್ನು ಕಲಿಸುವ ಗುರುವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದು ಹಲವಾರು ಮಂದಿ ಶಿಷ್ಯ್ರರಿಗೆ ಮಾರ್ಗದರ್ಶಕರಾಗಿ ನಮ್ಮ ಪರಂಪರೆಯ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪಯತ್ನ ಮಾಡುತ್ತಿದ್ದಾರೆ.ಅಲ್ಲದೆ ವಿದೇಶದಲ್ಲು ತಮ್ಮ ಈ ಕಲೆಯ ಪ್ರಸರಣವನ್ನು ಮಾಡಿದ ಕೀರ್ತಿ ಇವರಿಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ