ಬೆಂಗಳೂರಿನ ರೋಟರಿ ಕ್ಲಬ್ ನವರು ಆಯೋಜಿಸಿದ್ದ ೨೦೨೦-೨೧ ರ ಸಾಲಿನ ಗುರುದಕ್ಷಿಣೆ ಪ್ರಶಸ್ತಿಯನ್ನು ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆಯ ಕಲಾಗುಡಿಯಲ್ಲಿ ಈ ಒಂದು ಪ್ರಶಸ್ತಿಗೆ ಭಾಜನರಾದ ಯಕ್ಷಗಾನ, ರಂಗಭೂಮಿ,ಹಿರಿ ಹಾಗೂ ಕಿರುತೆರೆ ಕಲಾವಿದರಾದ ಡಾ.ರಾಧಾಕೃಷ್ಣ ಉರಾಳರಿಗೆ ಪ್ರದಾನ ಮಾಡಲಾಯಿತು. ರೋಟರಿ ಕ್ಲಬ್ ನ ಸದಸ್ಯ್ರರಾದ ಶಂಕರನಾರಾಯಣರವರು ಈ ಒಂದು ಪ್ರಶಸ್ತಿಯನ್ನು ಡಾ.ರಾಧಾಕೃಷ್ಣ ಉರಾಳರಿಗೆ ಪ್ರದಾನ ಮಾಡಿದರು. ಕಲಾಕದಂಬ ಆರ್ಟ್ ಸೆಂಟರ್ ಎಂಬ ಸಂಸ್ಥೆಯ ಮೂಲಕ ಡಾ.ರಾಧಾಕೃಷ್ಣ ಉರಾಳರವರು ಯಕ್ಷಗಾನ ಹೆಜ್ಜೆಗಳ ಕಲಿಸುವ ಹಾಗೂ ರಂಗಭೂಮಿ ಚಟುವಟಿಕಗಳನ್ನು ಕಲಿಸುವ ಗುರುವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದು ಹಲವಾರು ಮಂದಿ ಶಿಷ್ಯ್ರರಿಗೆ ಮಾರ್ಗದರ್ಶಕರಾಗಿ ನಮ್ಮ ಪರಂಪರೆಯ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪಯತ್ನ ಮಾಡುತ್ತಿದ್ದಾರೆ.ಅಲ್ಲದೆ ವಿದೇಶದಲ್ಲು ತಮ್ಮ ಈ ಕಲೆಯ ಪ್ರಸರಣವನ್ನು ಮಾಡಿದ ಕೀರ್ತಿ ಇವರಿಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
