ಕಳೆದ ೫೦ ವರ್ಷಗಳಿಂದ ಯಕ್ಷಗಾನ ತರಬೇತಿಯನ್ನು ನಡೆಸುತ್ತಾ ಬಂದ, ಯಕ್ಷಗಾನ ಪ್ರಪಂಚಕ್ಕೆ 2600 ಕ್ಕೂ ಮಿಕ್ಕಿ ಕಲಾವಿದರನ್ನು ನೀಡಿರುವ, ಯಕ್ಷಗಾನ ಚಿಂತಕ, ರಾಷೃಪ್ರಶಸ್ತಿ ಪುರಸ್ಕೃತ ಮುಖ್ಯೋಪಾದ್ಯಾಯ ದಿವಂಗತ ಐರೋಡಿ ಸದಾನಂದ ಹೆಬ್ಬಾರರಿಂದ ಸ್ಥಾಪಿಸಲ್ಪಟ್ಟ, ಪ್ರಾಚಾರ್ಯ ನಾರ್ಣಪ್ಪ ಉಪ್ಪೂರರು ಪ್ರಾಚಾರ್ಯರಾಗಿದ್ದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇವರು ಶಾಲಾ ಬಾಲಕರಿಗಾಗಿ ಗುರುಕುಲ ಪದ್ದತಿಯಂತೆ ವಸತಿ ಶಾಲೆಯನ್ನು ಕಳೆದ ಹತ್ತು ವರ್ಷಗಳಿಂದ ನಡೆಸುತ್ತಿದ್ದಾರೆ.
ಶಿಕ್ಷಣದೊಂದಿಗೆ ಯಕ್ಷಗಾನ ಎಂಬ ಧ್ಯೇಯದೊಂದಿಗೆ ಪ್ರಾರಂಭವಾಗಿರುವ ಈ ವಸತಿ ಶಾಲೆಯಲ್ಲಿ ಆರನೆಯ ತರಗತಿಯಿಂದ ಹತ್ತನೆಯ ತರಗತಿಯ ತನಕದ ಬಾಲಕರಿಗೆ ಪ್ರವೇಶ ನೀಡಲಾಗುವುದು. ಅವಕಾಶ ಪಡೆದ ಬಾಲಕರಿಗೆ ಹತ್ತಿರದ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದಲ್ಲದೇ ಉಚಿತ ಊಟ, ಉಪಹಾರ, ವಸತಿಯ ವ್ಯವಸ್ಥೆ,ಯಕ್ಷ ಶಿಕ್ಷಣದ ವ್ಯವಸ್ಥೆ ಮಾಡಲಾಗುವುದು.
ಗುರುಕುಲ ಪದ್ದತಿಯಂತೆ ನಡೆಸಲುದ್ದೇಶಿಸುವ ಈ ಶಾಲೆಗೆ ಸೇರಬಯಸುವವರು ಅಕ್ಟೋಬರ್ ತಿಂಗಳ 15ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದ್ದು, ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ -ಅಂಚೆ: ಐರೋಡಿ 576226, ಉಡುಪಿ ತಾಲೂಕು ಮತ್ತು ಜಿಲ್ಲೆ ದೂರವಾಣಿ 9880605610 ಯನ್ನು ಸಂಪರ್ಕಿಸಲು ಕೇಳಿಕೊಳ್ಳಲಾಗಿದೆ ಎಂಬ ಪ್ರಕಟಣೆಯನ್ನು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ನೀಡಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
