
ಯಕ್ಷಗಾನ ಕೇಂದ್ರ, ಇಂದ್ರಾಳಿ, ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಮತ್ತು ಕನ್ನಡ ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ, ಬೆಂಗಳೂರು ಇದರ ಸಹಯೋಗದಲ್ಲಿ ದಿನಾಂಕ 14.112021 ರಂದು ಬೆಳಿಗ್ಗೆ 10 ಗಂಟೆಗೆ ಯಕ್ಷಗಾನ ಕೇಂದ್ರ, ಇಂದ್ರಾಳಿಯಲ್ಲಿ ಒಂದು ತಿಂಗಳ ರಾಷ್ಟ್ರಮಟ್ಟದ ಯಕ್ಷಗಾನ ತರಬೇತಿಯ ಕಮ್ಮಟ ನಡೆಯಲಿದೆ.
ತರಬೇತಿ ಕಮ್ಮಟದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಕುಮಾರ ಬೆಕ್ಕೇರಿ ಅವರು ನೆರವೇರಿಸಲಿರುವರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಪಿ.ಎಲ್. ಎನ್. ರಾವ್ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ, ಶ್ರೀ ಭುವನ ಪ್ರಸಾದ್ ಹೆಗ್ಡೆ, ಶ್ರೀ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಭಾಗವಹಿಸಲಿರುವರು.
ಖ್ಯಾತ ಯಕ್ಷಗಾನ ಕಲಾವಿದ ಗುರು ಬನ್ನಂಜೆ ಸಂಜೀವ ಸುವರ್ಣ ನಿರ್ದೇಶನದಲ್ಲಿ ಉಚಿತವಾಗಿ ನಡೆಯುತ್ತಿರುವ ಎರಡನೇ ಕಮ್ಮಟ ಇದಾಗಿದೆ ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಕ್ಷಗಾನ ಕಲಾಭಿಮಾನಿಗಳಿಗೆಲ್ಲಾ ಆದರದ ಸ್ವಾಗತ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
