
ಹಿರಿಯ ವಿದ್ವಾಂಸ ನೀವಣೆ ಗಣೇಶ ಭಟ್ (80) 17.11.2021ರಂದು ರಾತ್ರಿ ಹುಬ್ಬಳ್ಳಿಯ ಮಗಳ ಮನೆಯಲ್ಲಿ ನಿಧನ ಹೊಂದಿದರು. ಅವರು ಪುತ್ರಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. ಪ್ರಸಿದ್ಧ ಪ್ರವಚನಕಾರ ಆಗಿದ್ದ ನೀವಣೆಯವರು ನೂರಾರು ಭಾಗವತ ಸಪ್ತಾಹ ಮಾಡಿದ್ದರು.
ಹರಿದಾಸರಾಗಿ, ಯಕ್ಷಗಾನ ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ ಸಾಧನೆ ಮಾಡಿದ್ದರು. ಹಲವು ಉಪಯುಕ್ತ ಪುಸ್ತಕಗಳನ್ನು ಬರೆದಿದ್ದಾರೆ. ಉಡುಪಿಯ ಯಕ್ಷಗಾನ ಕಲಾರಂಗ ಎರಡು ವರ್ಷದ ಹಿಂದೆ ಅವರಿಗೆ ಪೆರ್ಲ ಕೃಷ್ಣ ಭಟ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.