Saturday, July 6, 2024
Homeಯಕ್ಷಗಾನಮನೋಹರ್ ಕೆ. ಇವರಿಗೆ ಯಕ್ಷಚೇತನ ಪ್ರಶಸ್ತಿ

ಮನೋಹರ್ ಕೆ. ಇವರಿಗೆ ಯಕ್ಷಚೇತನ ಪ್ರಶಸ್ತಿ

ಯಕ್ಷಗಾನ ಕಲಾರಂಗದ ಸಕ್ರಿಯ, ಹಿರಿಯ ಕಾರ್ಯಕರ್ತರಿಗಾಗಿ, ವಿಜಯ ಕುಮಾರ್ ಮುದ್ರಾಡಿಯವರು ಸ್ಥಾಪಿಸಿದ ಯಕ್ಷಚೇತನ ಪ್ರಶಸ್ತಿಯನ್ನು ಈ ಬಾರಿ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಅಧಿಕಾರಿ, ಸಂಸ್ಥೆಯ ಕೋಶಾಧಿಕಾರಿ ಮನೋಹರ ಕೆ. ಇವರಿಗೆ ನೀಡಲಾಗುವುದು.

ನಿಡಂಬೂರು ಯುವಕ ಮಂಡಲ ಅಧ್ಯಕ್ಷರಾಗಿ, ಕುತ್ಪಾಡಿ ಯಕ್ಷಗಾನ ಮಂಡಳಿಯಲ್ಲಿ ವೇಷಧಾರಿಯಾಗಿ ಹಾಗೂ ಯಕ್ಷಗಾನ ಕಲಾರಂಗದಲ್ಲಿ ಕಳೆದ 7 ವರ್ಷಗಳಿಂದ ಸೇವೆ ಸಲ್ಲಿಸುತ್ತಿರವ ಮನೋಹರ ಕೆ. ಇವರಿಗೆ ನವಂಬರ್ 28, ಭಾನುವರ ರಾಜಾಂಗಣದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments