ಚಿಟ್ಟಾಣಿ ಅಭಿಮಾನಿ ಬಳಗ ಆಯೋಜಿಸಿದ ಚಿಟ್ಟಾಣಿ ಸಂಸ್ಮರಣಾ ಸಪ್ತಾಹವು 28-11-2021 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನ ಗೊಂಡಿತು. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮತ್ತು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಡಾ. ಎಂ. ಮೋಹನ ಆಳ್ವ, ಡಾ. ಚಂದ್ರಶೇಖರ ದಾಮ್ಲೆ, ಯು. ವಿಶ್ವನಾಥ ಶೆಣೈ, ಎಂ. ಗಂಗಾಧರ ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ, ನಾರಾಯಣ ಎಂ. ಹೆಗಡೆ, ಮನೋಹರ ಕೆ. ಉಪಸ್ಥಿತರಿದ್ದರು. ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನೆಯ ನಂತರ ಸತ್ಯಹರಿಶ್ಚಂದ್ರ ಯಕ್ಷಗಾನ ಪ್ರದರ್ಶನಗೊಂಡಿತು.