ಕಲಾಸಂಗಮ ಚಾರಿಟೇಬಲ್ ಟ್ರಸ್ಟಿನ ಅಂಗಸಂಸ್ಥೆಯಾದ ಶ್ರೀ ಯಕ್ಷಗಾನ ಕಲಾಮೇಳ, ಶಿರಸಿಯು ತನ್ನ ಈ ವರ್ಷದ ತಿರುಗಾಟವನ್ನು ಆರಂಭಿಸಲು ಅಣಿಯಾಗಿದೆ. ಈ ವರ್ಷದ ಪ್ರಥಮ ಪ್ರದರ್ಶನ ‘ಮಾಳವಿಕಾ ಪರಿಣಯ’ ಎಂಬ ನೂತನ ಪ್ರಸಂಗದೊಂದಿಗೆ ದಿನಾಂಕ 05.12.2021ರ ಭಾನುವಾರದಂದು ಶಿರಸಿಯ ಲಯನ್ಸ್ ಸಭಾಂಗಣದಲ್ಲಿ (ಸಂಜೆ ಘಂಟೆ 5ರಿಂದ 10ರ ವರೆಗೆ) ಆರಂಭವಾಗಲಿದೆ ಎಂದು ಮೇಳದ ವ್ಯವಸ್ಥಾಪಕರೂ ಕಲಾಸಂಗಮ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರೂ ಆಗಿರುವ ಶ್ರೀ ಕೇಶವ ಹೆಗಡೆ ಮಂಗಳೂರು (ನಾಗರಕುರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವರ್ಷದ ಹೊಸ ಪ್ರಸಂಗ ‘ಮಾಳವಿಕಾ ಪರಿಣಯ’ ಎಂಬ ಕಥಾನಕವು ಮಹಾಕವಿ ಕಾಳಿದಾಸ ವಿರಚಿತ “ಮಾಳವಿಕಾಗ್ನಿಮಿತ್ರಮ್” ಎಂಬ ಸಂಸ್ಕೃತ ನಾಟಕದ ಕಥಾ ಭಾಗವಾಗಿದೆ. ಈ ಕತೆಯನ್ನು ಯಕ್ಷಗಾನಕ್ಕೆ ಅಳವಡಿಸಿದವರು ಶ್ರೀ ಕೇಶವ ಹೆಗಡೆ ಮಂಗಳೂರು (ನಾಗರಕುರ). ಪ್ರಸಂಗದ ಪದ್ಯ ರಚನೆಯನ್ನು ತೆಂಕು ಬಡಗಿನ ಕಲಾವಿದ ಎಂ.ಕೆ. ರಮೇಶ ಆಚಾರ್ಯ ಅವರು ಮಾಡಿದ್ದಾರೆ. ಶ್ರೀ ಯಕ್ಷಗಾನ ಕಲಾಮೇಳ, ಶಿರಸಿಯು ಉತ್ಸಾಹಿ ಕಲಾವಿದರನ್ನೊಳಗೊಂಡ ತಂಡವಾಗಿದೆ. ಶ್ರೀ ಕೇಶವ ಹೆಗಡೆ ಮಂಗಳೂರು ಅವರ ಸಾರಥ್ಯದಲ್ಲಿ ತಿರುಗಾಟಕ್ಕೆ ಹೊರಟು ನಿಂತಿರುವ ಮೇಳಕ್ಕೆ ಕಲಾಭಿಮಾನಿಗಳು ಶುಭ ಹಾರೈಸಿದ್ದಾರೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು