ಯಕ್ಷಗಾನ ಕಲಾವಿದ ಶಿವಮೊಗ್ಗ ಜಿಲ್ಲೆಯ ನರಸಿಂಹರಾಜಪುರ ನಿವಾಸಿ ಹೊಸಕೊಪ್ಪ ಶಿವರಾಮ ಶೆಟ್ಟಿ (69) 09-12-2021ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ
ಗಂಭಿರ ಪುರುಷ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದ ಶಿವರಾಮ ಶೆಟ್ಟಿಯವರು ತೆಂಕು-ಬಡಗು ಎರಡೂ ತಿಟ್ಟುಗಳಲ್ಲಿ ಸಮರ್ಥ ವೇಷಧಾರಿಯಾಗಿದ್ದರು. ಮಂದಾರ್ತಿ, ಸಾಲಿಗ್ರಾಮ, ಕಮಲಶಿಲೆ, ಗೋಳಿಗರಡಿ, ಮಾರಣಕಟ್ಟೆ, ನಾಗರಕೋಡಿಗೆ, ಸೌಕೂರು, ಹೊಸಳ್ಳಿ, ರಂಜದಕಟ್ಟೆ ಮೇಳಗಳಲ್ಲಿ ಕಲಾಸೇವೆಗೈದಿದ್ದರು.
ಕಟೀಲು ಮೇಳದಲ್ಲಿ ದೀರ್ಘಕಾಲ ಬಣ್ಣದ ವೇಷಧಾರಿಯಾಗಿ ಸೇವೆ ಗೈದ ಇವರು ಈ ವರ್ಷ ನಿವೃತ್ತರಾಗಿದ್ದರು. 2015ರಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಅವರಿಗೆ ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
