ಯಕ್ಷಗಾನ ಕಲಾವಿದ ಶಿವಮೊಗ್ಗ ಜಿಲ್ಲೆಯ ನರಸಿಂಹರಾಜಪುರ ನಿವಾಸಿ ಹೊಸಕೊಪ್ಪ ಶಿವರಾಮ ಶೆಟ್ಟಿ (69) 09-12-2021ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ
ಗಂಭಿರ ಪುರುಷ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದ ಶಿವರಾಮ ಶೆಟ್ಟಿಯವರು ತೆಂಕು-ಬಡಗು ಎರಡೂ ತಿಟ್ಟುಗಳಲ್ಲಿ ಸಮರ್ಥ ವೇಷಧಾರಿಯಾಗಿದ್ದರು. ಮಂದಾರ್ತಿ, ಸಾಲಿಗ್ರಾಮ, ಕಮಲಶಿಲೆ, ಗೋಳಿಗರಡಿ, ಮಾರಣಕಟ್ಟೆ, ನಾಗರಕೋಡಿಗೆ, ಸೌಕೂರು, ಹೊಸಳ್ಳಿ, ರಂಜದಕಟ್ಟೆ ಮೇಳಗಳಲ್ಲಿ ಕಲಾಸೇವೆಗೈದಿದ್ದರು.
ಕಟೀಲು ಮೇಳದಲ್ಲಿ ದೀರ್ಘಕಾಲ ಬಣ್ಣದ ವೇಷಧಾರಿಯಾಗಿ ಸೇವೆ ಗೈದ ಇವರು ಈ ವರ್ಷ ನಿವೃತ್ತರಾಗಿದ್ದರು. 2015ರಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಅವರಿಗೆ ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
