Friday, September 20, 2024
Homeಯಕ್ಷಗಾನಕಲಾವಿದರ ಬಸ್ ಪಾಸ್ ವಿತರಣೆ

ಕಲಾವಿದರ ಬಸ್ ಪಾಸ್ ವಿತರಣೆ

ಕೆನರಾ ಬಸ್ ಮಾಲಕರ ಸಹಕಾರದಿಂದ ಯಕ್ಷಗಾನ ಕಲಾರಂಗ ಕಳೆದ ಹಲವು ವರ್ಷಗಳಿಂದ ವೃತ್ತಿ ಮೇಳದ ಕಲಾವಿದರಿಗೆ ಪ್ರತಿಶತ 50 ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಾ ಬಂದಿದ್ದು, ಈ ವರ್ಷದ ಆಗಸ್ಟ್ 31, 2022ರ ವರೆಗೆ ಅನ್ವಯವಾಗುವಂತೆ ಕೊಡಮಾಡಿದ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಇಂದು (18-12-2021) ಸಂಸ್ಥೆಯ ಕಚೇರಿಯಲ್ಲಿ ಜರಗಿತು.

ಹಿರಿಯ ಸ್ತ್ರೀ ವೇಷಧಾರಿ ಡಾ. ಕೋಳ್ಯೂರು ರಾಮಚಂದ್ರ ರಾವ್ ಮೇಳದ ಪ್ರತಿನಿಧಿಗಳಿಗೆ ವಿತರಿಸಿದರು. ಮಂದಾರ್ತಿ ಮೇಳದ ಮಹಾಬಲ ನಾಯ್ಕ್, ಕೇಶವ ಆಚಾರ್ ಮತ್ತು ಮಾರಣಕಟ್ಟೆ ಮೇಳದ ಶ್ರೀನಿವಾಸ ಶೆಟ್ಟಿ ಸ್ವೀಕರಿಸಿದರು. 35 ವಿವಿಧ ಮೇಳಗಳ 400ಕ್ಕೂ ಮಿಕ್ಕಿದ ಕಲಾವಿದರು ಪಾಸ್ ಸೌಲಭ್ಯ ಪಡೆಯಲಿದ್ದಾರೆ.

ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್ ಸ್ವಾಗತಿಸಿದರು. ಪದಾಧಿಕಾರಿಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ, ನಾರಾಯಣ ಎಮ್. ಹೆಗಡೆ, ಮನೋಹರ ಕೆ., ಅನಂತರಾಜ ಉಪಾಧ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ವೃತ್ತಿ ಕಲಾವಿದರಿಗೆ ಈ ಸೌಲಭ್ಯ ಕಲ್ಪಿಸಿದ ಕೆನರಾ ಬಸ್ ಮಾಲಕರ ಸಂಘದ ಪದಾಧಿಕಾರಿಗಳಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments