ಕೋಟೆಕಾರಿನ ಒಲುಮೆ ನಿವಾಸದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಇವರನ್ನು ಗೌರವಿಸಲಾಯಿತು.
ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ. ಎ.ವಿ. ನಾರಾಯಣ, ಅಧ್ಯಕ್ಷ ಕೈಯೂರು ನಾರಾಯಣ ಭಟ್ಟ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯಗೇರುಕಟ್ಟೆ ಟ್ರಸ್ಟಿಗಳಾದ ಭಾಸ್ಕರ ಬಾರ್ಯ, ದುಗ್ಗಪ್ಪ ಎನ್, ಡಾ. ಬಿ.ಎನ್ ಮಹಾಲಿಂಗ ಭಟ್, ಜಯರಾಮ ಭಂಡಾರಿ ಧರ್ಮಸ್ಥಳ, ತಾಲೂಕು ಸಂಚಾಲಕರಾದ ವಸಂತ ಸುವರ್ಣ ಬೆಳ್ತಂಗಡಿ, ಬಾಲಚಂದ್ರ ಶೆಟ್ಟಿ ಸೋಮೇಶ್ವರ, ಸಂತೋಷ ಕಾವೂರು, ಬಿ. ಸೀತಾರಾಮ ಶೆಟ್ಟಿ ಉಜಿರೆ, ಉದಯಶಂಕರ ರೈ ಪುಣಚ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಉದ್ದೇಶಗಳ ಬಗ್ಗೆ ತಿಳಿದುಕೊಂಡ ಅಮೃತ ಸೋಮೇಶ್ವರ ಮಾತನಾಡಿ ಉತ್ತಮ ಚಿಂತನೆಯಿ0ದ ಕೂಡಿದ ಕಾರ್ಯಗಳಿಗೆ ಸರ್ವರ ಸಹಕಾರ ಲಭಿಸಲಿ ಎಂದು ತಿಳಿಸಿದರು.
ದಿನ ನಿತ್ಯವೂ ಸಾಹಿತ್ಯ ರಚನೆಯ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದಾಗಿ ತಿಳಿಸಿ ನನ್ನಿಂದ ರಚಿಸಲ್ಪಟ್ಟ ಎಲ್ಲಾ ಯಕ್ಷಗಾನ ಪ್ರಸಂಗಗಳು ಯಶಸ್ವಿಯಾಗಿ ಪ್ರದರ್ಶನಗೊಳ್ಳಲು ಕಲಾವಿದರ ಶ್ರಮವು ಮುಖ್ಯವಾಗಿತ್ತು ಎಂಬುದನ್ನು ಸ್ಮರಿಸಿಕೊಂಡರು.
ಅಮೃತರ ಪತ್ನಿ ನರ್ಮದ, ಪುತ್ರಜೀವನ್ ಮತ್ತು ಸೊಸೆ ಸತ್ಯವತಿ ಪ್ರತಿಷ್ಠಾನದ ಪದಾಧಿಕಾರಿಗಳನ್ನು ಸತ್ಕರಿಸಿದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ