ಕೋಟೆಕಾರಿನ ಒಲುಮೆ ನಿವಾಸದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಇವರನ್ನು ಗೌರವಿಸಲಾಯಿತು.
ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ. ಎ.ವಿ. ನಾರಾಯಣ, ಅಧ್ಯಕ್ಷ ಕೈಯೂರು ನಾರಾಯಣ ಭಟ್ಟ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯಗೇರುಕಟ್ಟೆ ಟ್ರಸ್ಟಿಗಳಾದ ಭಾಸ್ಕರ ಬಾರ್ಯ, ದುಗ್ಗಪ್ಪ ಎನ್, ಡಾ. ಬಿ.ಎನ್ ಮಹಾಲಿಂಗ ಭಟ್, ಜಯರಾಮ ಭಂಡಾರಿ ಧರ್ಮಸ್ಥಳ, ತಾಲೂಕು ಸಂಚಾಲಕರಾದ ವಸಂತ ಸುವರ್ಣ ಬೆಳ್ತಂಗಡಿ, ಬಾಲಚಂದ್ರ ಶೆಟ್ಟಿ ಸೋಮೇಶ್ವರ, ಸಂತೋಷ ಕಾವೂರು, ಬಿ. ಸೀತಾರಾಮ ಶೆಟ್ಟಿ ಉಜಿರೆ, ಉದಯಶಂಕರ ರೈ ಪುಣಚ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಉದ್ದೇಶಗಳ ಬಗ್ಗೆ ತಿಳಿದುಕೊಂಡ ಅಮೃತ ಸೋಮೇಶ್ವರ ಮಾತನಾಡಿ ಉತ್ತಮ ಚಿಂತನೆಯಿ0ದ ಕೂಡಿದ ಕಾರ್ಯಗಳಿಗೆ ಸರ್ವರ ಸಹಕಾರ ಲಭಿಸಲಿ ಎಂದು ತಿಳಿಸಿದರು.
ದಿನ ನಿತ್ಯವೂ ಸಾಹಿತ್ಯ ರಚನೆಯ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದಾಗಿ ತಿಳಿಸಿ ನನ್ನಿಂದ ರಚಿಸಲ್ಪಟ್ಟ ಎಲ್ಲಾ ಯಕ್ಷಗಾನ ಪ್ರಸಂಗಗಳು ಯಶಸ್ವಿಯಾಗಿ ಪ್ರದರ್ಶನಗೊಳ್ಳಲು ಕಲಾವಿದರ ಶ್ರಮವು ಮುಖ್ಯವಾಗಿತ್ತು ಎಂಬುದನ್ನು ಸ್ಮರಿಸಿಕೊಂಡರು.
ಅಮೃತರ ಪತ್ನಿ ನರ್ಮದ, ಪುತ್ರಜೀವನ್ ಮತ್ತು ಸೊಸೆ ಸತ್ಯವತಿ ಪ್ರತಿಷ್ಠಾನದ ಪದಾಧಿಕಾರಿಗಳನ್ನು ಸತ್ಕರಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

