ದಿ. ವೇಣೂರು ಸುಂದರ ಆಚಾರ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ವೇಣೂರಿನಲ್ಲಿ ಜುಲೈ 10 ರಂದು ನಡೆಸಲು ಉದ್ದೇಶಿಸಲಾಗಿದ್ದು ಸಮಿತಿಗೆ ಪದಾಧಿಕಾರಿಗಳನ್ನು ವೇಣೂರು ಯಾತ್ರಿ ನಿವಾಸದಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ರವೀಂದ್ರ ಆಚಾರ್ಯ ವೇಣೂರು (ಗೌರವಾಧ್ಯಕ್ಷರು), ಖಂಡಿಗ ಶ್ರೀಧರಾಚಾರ್ಯ (ಅಧ್ಯಕ್ಷರು), ಉಪಾಧ್ಯಕ್ಷರಾಗಿ ಸದಾಶಿವ ಕುಲಾಲ್ ವೇಣೂರು, ಅಶೋಕ ಆಚಾರ್ಯ ವೇಣೂರು, ಚಂದ್ರಶೇಖರ ಭಟ್ ಕೊಂಕಣಾಜೆ, ಸದಾಶಿವ ಆಚಾರ್ಯ ವೇಣೂರು, ಕಾರ್ಯದರ್ಶಿಯಾಗಿ ಪ್ರಕಾಶ್ ಪುರೋಹಿತ್ ಇವರನ್ನು ಆಯ್ಕೆ ಮಾಡಲಾಯಿತು.
ಸಹ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಆಚಾರ್ಯ, ಕೋಶಾಧಿಕಾರಿಯಾಗಿ ಸೀತಾರಾಮಾಚಾರ್ಯ ವೇಣೂರು ಇವರನ್ನು ಆಯ್ಕೆ ಮಾಡಲಾಯಿತು.
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು
- ಸತ್ಸಂಗದ ಕೊನೆಗೆ ನಿರ್ಗಮನ ವೇಳೆಯಲ್ಲಿ ಕಾಲ್ತುಳಿತದಲ್ಲಿ 116 ಮಂದಿ ಸಾವು – ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ಭೀಕರ ಘಟನೆ
ಸಮಿತಿಯ ಸದಸ್ಯರಾಗಿ ಪ್ರಭಾಕರ ಆಚಾರ್ಯ, ಸತೀಶ್ ಆಚಾರ್ಯ, ಪ್ರಭಾಕರ ಪ್ರಭು, ಗಂಗಾಧರ್ ಆಚಾರ್ಯ, ಮಮತಾ. ಬಿ ಆಚಾರ್ ಮಂಗಳೂರು, ಚಂದ್ರಹಾಸ ಆಚಾರ್ಯ ಮತ್ತು ಸಲಹೆಗಾರರಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಭಾಸ್ಕರ ಅಂಡಿAಜೆ, ಯಶೋಧರ ಆರಿಗ ವೇಣೂರು ಇವರನ್ನು ಆಯ್ಕೆ ಮಾಡಲಾಯಿತು.
ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಯಿತು. ಸದಾನಂದ ಆಚಾರ್ಯ ನೂರಾಲ್ ಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಸೀತಾರಾಮಾಚಾರ್ಯ ವೇಣೂರು ಸ್ವಾಗತಿಸಿ ಪ್ರಭಾಕರ ಪ್ರಭು ವಂದಿಸಿದರು.