ದಿ. ವೇಣೂರು ಸುಂದರ ಆಚಾರ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ವೇಣೂರಿನಲ್ಲಿ ಜುಲೈ 10 ರಂದು ನಡೆಸಲು ಉದ್ದೇಶಿಸಲಾಗಿದ್ದು ಸಮಿತಿಗೆ ಪದಾಧಿಕಾರಿಗಳನ್ನು ವೇಣೂರು ಯಾತ್ರಿ ನಿವಾಸದಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ರವೀಂದ್ರ ಆಚಾರ್ಯ ವೇಣೂರು (ಗೌರವಾಧ್ಯಕ್ಷರು), ಖಂಡಿಗ ಶ್ರೀಧರಾಚಾರ್ಯ (ಅಧ್ಯಕ್ಷರು), ಉಪಾಧ್ಯಕ್ಷರಾಗಿ ಸದಾಶಿವ ಕುಲಾಲ್ ವೇಣೂರು, ಅಶೋಕ ಆಚಾರ್ಯ ವೇಣೂರು, ಚಂದ್ರಶೇಖರ ಭಟ್ ಕೊಂಕಣಾಜೆ, ಸದಾಶಿವ ಆಚಾರ್ಯ ವೇಣೂರು, ಕಾರ್ಯದರ್ಶಿಯಾಗಿ ಪ್ರಕಾಶ್ ಪುರೋಹಿತ್ ಇವರನ್ನು ಆಯ್ಕೆ ಮಾಡಲಾಯಿತು.
ಸಹ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಆಚಾರ್ಯ, ಕೋಶಾಧಿಕಾರಿಯಾಗಿ ಸೀತಾರಾಮಾಚಾರ್ಯ ವೇಣೂರು ಇವರನ್ನು ಆಯ್ಕೆ ಮಾಡಲಾಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಸಮಿತಿಯ ಸದಸ್ಯರಾಗಿ ಪ್ರಭಾಕರ ಆಚಾರ್ಯ, ಸತೀಶ್ ಆಚಾರ್ಯ, ಪ್ರಭಾಕರ ಪ್ರಭು, ಗಂಗಾಧರ್ ಆಚಾರ್ಯ, ಮಮತಾ. ಬಿ ಆಚಾರ್ ಮಂಗಳೂರು, ಚಂದ್ರಹಾಸ ಆಚಾರ್ಯ ಮತ್ತು ಸಲಹೆಗಾರರಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಭಾಸ್ಕರ ಅಂಡಿAಜೆ, ಯಶೋಧರ ಆರಿಗ ವೇಣೂರು ಇವರನ್ನು ಆಯ್ಕೆ ಮಾಡಲಾಯಿತು.
ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಯಿತು. ಸದಾನಂದ ಆಚಾರ್ಯ ನೂರಾಲ್ ಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಸೀತಾರಾಮಾಚಾರ್ಯ ವೇಣೂರು ಸ್ವಾಗತಿಸಿ ಪ್ರಭಾಕರ ಪ್ರಭು ವಂದಿಸಿದರು.

