ಎರಡು ದಿನಗಳ ಕರ್ನಾಟಕ ರಾಜ್ಯ ಪ್ರವಾಸವನ್ನು ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದಿದ್ದಾರೆ.
ಅವರನ್ನು ಬೆಂಗಳೂರಿನ ಯಲಹಂಕ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪ್ರಧಾನಿ ಮೋದಿಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮತ್ತು ಅದರ ಜೊತೆಗೆ ಮೂರು ಹೆಲಿಕಾಪ್ಟರ್ ಗಳು ಬೆಂಗಳೂರಿಗೆ ಬಂದಿಳಿದಿವೆ.
ಅವರನ್ನು ಯಲಹಂಕ ವಾಯುನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.
ಸುಮಾರು ಒಂದೂವರೆ ವರ್ಷದ ನಂತರ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಮೈಸೂರು ಅರಮನೆ ಮುಂಭಾಗ ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಮುಖ್ಯ ಕಾರ್ಯಕ್ರಮವಾಗಿದೆ.
ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು, ನಾಳೆ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ತಿರುವನಂತಪುರಕ್ಕೆ ತೆರಳಲಿದ್ದಾರೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

