ಯಕ್ಷಗಾನ ಕ್ಷೇತ್ರದಲ್ಲಿ ಹಲವಾರು ಮೌಲ್ಯಯುತ ಚಟುವಟಿಕೆಯ ಮೂಲಕ ಸಂಚಲನ ಮೂಡಿಸುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ,(ರಿ.) ಕಾಸರಗೋಡು ಇದರ ನೇತೃತ್ವದ ಯಕ್ಷಾನುಗ್ರಹ ವಾಟ್ಸಾಪ್ ಬಳಗ ಕಳೆದ ಮೇ ತಿಂಗಳಿಂದ, ಲಾಕ್ ಡೌನ್ ಸಮಯದಲ್ಲಿ ವಾಟ್ಸಾಪ್ ಮಾದ್ಯಮದ ಸದ್ಬಳಕೆ ಎಂದು ಆರಂಭಿಸಿದ ‘ಮರೆಯಲಾಗದ ಮಹಾನುಭಾವರು’- ಕೀರ್ತಿಶೇಷ ಯಕ್ಷಗಾನ ಕಲಾವಿದರ ಸಂಸ್ಮರಣೆಯ ಲೇಖನಗಳ ಮಾಲಿಕೆಯ 200ನೇ ಲೇಖನ ನಾಳೆ ಅಂದರೆ 24.06.2022ನೆಯ ಶುಕ್ರವಾರ ಪ್ರಕಟವಾಗಲಿದೆ.
ಈ ವರೆಗೆ 190ಕ್ಕೂ ಹೆಚ್ಚು ಕೀರ್ತಿಶೇಷ ಯಕ್ಷಗಾನ ಕಲಾವಿದರ ಸಂಸ್ಮರಣಾ ಲೇಖನಗಳನ್ನು ಪ್ರಕಟಿಸಿ ಯಕ್ಷಾನುಗ್ರಹ ವಾಟ್ಸಾಪ್ ಬಳಗ ಧನ್ಯತೆಯ ಅನುಭೂತಿಯನ್ನು ಅನುಭವಿಸಿದೆ.
ಈ ಎಲ್ಲಾ ಲೇಖನಗಳನ್ನು ಪುಸ್ತಕ ಪ್ರಕಟಣೆಯ ಮೂಲಕ ಹೊರತರುವ ಬಗ್ಗೆ ಹಲವು ಮಹತ್ವದ ತೀರ್ಮಾನ ಮಾಡಲಾಗಿದೆ. ಶೀಘ್ರದಲ್ಲಿಯೇ ಈ ಮಹತ್ ಬೃಹತ್ ಗ್ರಂಥ ಹೊರಬರಲಿದೆ.
ಮುಂದಿನ ಪೀಳಿಗೆಗೆ ಧಾಖಲೆ ಯಾಗಿರುವ ಮಹತ್ ಗ್ರಂಥದಲ್ಲಿ 190ಕ್ಕೂ ಹೆಚ್ಚು ಕೀರ್ತಿಶೇಷ ಕಲಾವಿದರ ಸಂಪೂರ್ಣ ವಿವರ ಲಭ್ಯವಿರುತ್ತದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

