ಯಕ್ಷಗಾನ ಕ್ಷೇತ್ರದಲ್ಲಿ ಹಲವಾರು ಮೌಲ್ಯಯುತ ಚಟುವಟಿಕೆಯ ಮೂಲಕ ಸಂಚಲನ ಮೂಡಿಸುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ,(ರಿ.) ಕಾಸರಗೋಡು ಇದರ ನೇತೃತ್ವದ ಯಕ್ಷಾನುಗ್ರಹ ವಾಟ್ಸಾಪ್ ಬಳಗ ಕಳೆದ ಮೇ ತಿಂಗಳಿಂದ, ಲಾಕ್ ಡೌನ್ ಸಮಯದಲ್ಲಿ ವಾಟ್ಸಾಪ್ ಮಾದ್ಯಮದ ಸದ್ಬಳಕೆ ಎಂದು ಆರಂಭಿಸಿದ ‘ಮರೆಯಲಾಗದ ಮಹಾನುಭಾವರು’- ಕೀರ್ತಿಶೇಷ ಯಕ್ಷಗಾನ ಕಲಾವಿದರ ಸಂಸ್ಮರಣೆಯ ಲೇಖನಗಳ ಮಾಲಿಕೆಯ 200ನೇ ಲೇಖನ ನಾಳೆ ಅಂದರೆ 24.06.2022ನೆಯ ಶುಕ್ರವಾರ ಪ್ರಕಟವಾಗಲಿದೆ.
ಈ ವರೆಗೆ 190ಕ್ಕೂ ಹೆಚ್ಚು ಕೀರ್ತಿಶೇಷ ಯಕ್ಷಗಾನ ಕಲಾವಿದರ ಸಂಸ್ಮರಣಾ ಲೇಖನಗಳನ್ನು ಪ್ರಕಟಿಸಿ ಯಕ್ಷಾನುಗ್ರಹ ವಾಟ್ಸಾಪ್ ಬಳಗ ಧನ್ಯತೆಯ ಅನುಭೂತಿಯನ್ನು ಅನುಭವಿಸಿದೆ.
ಈ ಎಲ್ಲಾ ಲೇಖನಗಳನ್ನು ಪುಸ್ತಕ ಪ್ರಕಟಣೆಯ ಮೂಲಕ ಹೊರತರುವ ಬಗ್ಗೆ ಹಲವು ಮಹತ್ವದ ತೀರ್ಮಾನ ಮಾಡಲಾಗಿದೆ. ಶೀಘ್ರದಲ್ಲಿಯೇ ಈ ಮಹತ್ ಬೃಹತ್ ಗ್ರಂಥ ಹೊರಬರಲಿದೆ.
ಮುಂದಿನ ಪೀಳಿಗೆಗೆ ಧಾಖಲೆ ಯಾಗಿರುವ ಮಹತ್ ಗ್ರಂಥದಲ್ಲಿ 190ಕ್ಕೂ ಹೆಚ್ಚು ಕೀರ್ತಿಶೇಷ ಕಲಾವಿದರ ಸಂಪೂರ್ಣ ವಿವರ ಲಭ್ಯವಿರುತ್ತದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

