ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡ ಪುತ್ತೂರು ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿರುವ ಶ್ರೀ ಲೋಕೇಶ್ ಎಸ್.ಆರ್ ಅವರು ಇಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ, ಶಿಕ್ಷಣ ಇಲಾಖೆಗೆ ಈ ಹಿಂದೆ ದೊರೆತ ಸಹಕಾರ ಮುಂದೆಯೂ ದೊರೆಯಲಿ ಎಂದು ಆಶಿಸಿದರು.
ಪುತ್ತೂರು ತಾಲೂಕಿಗೆ ವರ್ಗಾವಣೆಗೊಂಡು ಆಗಮಿಸಿದ ಬಳಿಕ ಈ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಭೇಟಿ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಭೇಟಿಯೊಂದಿಗೆ ಆರಂಭಿಸಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದರು ಹಾಗೂ ಶಾಲಾ ಶೈಕ್ಷಣಿಕ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಹಾಗೂ ಹಿರಿಯ ಶಿಕ್ಷಕರೊಂದಿಗೆ ವಿಚಾರ ವಿನಿಮಯ ನಡೆಸಿದರು.
ಈ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ಚೇತರಿಕೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಗೆ ಒತ್ತು ನೀಡುವಂತೆ ಸೂಚಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ ಮತ್ತು ಸಂಚಾಲಕರಾದ ಶ್ರೀ ರವಿನಾರಾಯಣ.ಎಂ ಉಪಸ್ಥಿತರಿದ್ದು, ಮಾನ್ಯ ಶಿಕ್ಷಣಾಧಿಕಾರಿಗಳಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

