ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡ ಪುತ್ತೂರು ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿರುವ ಶ್ರೀ ಲೋಕೇಶ್ ಎಸ್.ಆರ್ ಅವರು ಇಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ, ಶಿಕ್ಷಣ ಇಲಾಖೆಗೆ ಈ ಹಿಂದೆ ದೊರೆತ ಸಹಕಾರ ಮುಂದೆಯೂ ದೊರೆಯಲಿ ಎಂದು ಆಶಿಸಿದರು.
ಪುತ್ತೂರು ತಾಲೂಕಿಗೆ ವರ್ಗಾವಣೆಗೊಂಡು ಆಗಮಿಸಿದ ಬಳಿಕ ಈ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಭೇಟಿ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಭೇಟಿಯೊಂದಿಗೆ ಆರಂಭಿಸಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದರು ಹಾಗೂ ಶಾಲಾ ಶೈಕ್ಷಣಿಕ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಹಾಗೂ ಹಿರಿಯ ಶಿಕ್ಷಕರೊಂದಿಗೆ ವಿಚಾರ ವಿನಿಮಯ ನಡೆಸಿದರು.
ಈ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ಚೇತರಿಕೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಗೆ ಒತ್ತು ನೀಡುವಂತೆ ಸೂಚಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ ಮತ್ತು ಸಂಚಾಲಕರಾದ ಶ್ರೀ ರವಿನಾರಾಯಣ.ಎಂ ಉಪಸ್ಥಿತರಿದ್ದು, ಮಾನ್ಯ ಶಿಕ್ಷಣಾಧಿಕಾರಿಗಳಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

