ಖ್ಯಾತ ವಾಸ್ತುತಜ್ಞ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ. ಪ್ರಸಿದ್ಧ ವಾಸ್ತು ತಜ್ಞರಾದ ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ನ ಪ್ರೆಸಿಡೆಂಟ್ ಹೊಟೇಲ್ ನ ರಿಸಪ್ಶನ್ ಬಳಿ ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಡೆದಿದೆ.
ಗುರೂಜಿಯವರ ಆಪ್ತರಾದ ಮಹಾಂತೇಶ್ ಶಿರೂರು, ಮಂಜುನಾಥ್ ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹಂತಕ ಮಹಾಂತೇಶ್ ನ ಪತ್ನಿ ವನಜಾಕ್ಷಿ ಯನ್ನು ವಿಚಾರಣೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.