ತೆಂಕುತಿಟ್ಟು ಯಕ್ಷಗಾನದ ದಂತಕಥೆ, ಮಹಾನ್ ಭಾಗವತರಾದ ಶ್ರೀ ದಾಮೋದರ ಮಂಡೆಚ್ಚರ ಹೆಸರಿನಲ್ಲಿ ನೀಡಲಾಗುವ ಮಂಡೆಚ್ಚ ಪ್ರಶಸ್ತಿಯನ್ನು ಈ ಬಾರಿ ಅವರ ಪ್ರಿಯ ಶಿಷ್ಯರಾದ ಖ್ಯಾತ ಭಾಗವತ ಶ್ರೀ ದಿನೇಶ ಅಮ್ಮಣ್ಣಾಯರಿಗೆ ನೀಡಲಾಗುತ್ತದೆ.
ದಿನಾಂಕ 10.07.2022ರಂದು ಭಾನುವಾರ ಮದ್ಯಾಹ್ನ ಘಂಟೆ 3.30ಕ್ಕೆ ಶ್ರೀ ಕಟೀಲು ಕ್ಷೇತ್ರದ ಸರಸ್ವತಿ ಸದನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಗುತ್ತದೆ.
ಆ ದಿನ ಯಕ್ಷಗಾಯನ ಮತ್ತು ಯಕ್ಷಗಾನ ಬಯಲಾಟವೂ ನಡೆಯಲಿದೆ.
ವಿವರಗಳಿಗೆ ಕರಪತ್ರ ನೋಡಿ
