ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಎಂಬಲ್ಲಿ ಬದಿಯ ಗುಡ್ಡ ಜರಿದು ಬಿದ್ದು ಸಾರಿಗೆ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.
ಈ ದಿನ ಅಂದರೆ ಮಂಗಳವಾರ ಮುಂಜಾನೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.
ಕಾಸರಗೋಡು ಜಿಲ್ಲೆಯಿಂದ ದಿನನಿತ್ಯ ಪುತ್ತೂರಿಗೆ ಪ್ರಯಾಣಿಸುವ ಪ್ರಯಾಣಿಕರು ಅರ್ಧ ದಾರಿಯಲ್ಲಿ ಪರದಾಡುವಂತಾಗಿದೆ.