ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಹಾಗೂ ವಿಜಯಕರ್ನಾಟಕ ದಿನಪತ್ರಿಕೆ ಇವರು ವಿಶ್ವ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ನಿಲಿಷ್ಕಾ ಕಲ್ಪನೆ (ನೆಹರು ನಗರದ ನಿವಾಸಿ,ಇಂಜಿನಿಯರ್ ಶ್ರೀ ದಿನೇಶ್ .ಕೆ.ಜಿ ಮತ್ತು ಅಧ್ಯಾಪಕಿ ಶ್ರೀಮತಿ ಸ್ಮಿತಾಶ್ರೀ ಇವರ ಪುತ್ರಿ) ತೃತೀಯ ಬಹುಮಾನ ಪಡೆದಿರುತ್ತಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಇತ್ತೀಚೆಗೆ ಮಂಗಳೂರಿನಲ್ಲಿ ಗಣ್ಯರ ಸಮ್ಮುಖ ನಡೆದಿರುತ್ತದೆ.