Thursday, May 14, 2026
Homeಸುದ್ದಿಬೆಳ್ಳಾರೆ ವಿಶ್ವನಾಥ ರೈ ನಿಧನ - ಯಕ್ಷಗಾನ ಕಲಾರಂಗ ಸಂತಾಪ

ಬೆಳ್ಳಾರೆ ವಿಶ್ವನಾಥ ರೈ ನಿಧನ – ಯಕ್ಷಗಾನ ಕಲಾರಂಗ ಸಂತಾಪ

ಉಡುಪಿ : 35 ವರ್ಷ ಕರ್ನಾಟಕ ಮೇಳದ ತಿರುಗಾಟವೂ ಸೇರಿದಂತೆ ವಿವಿಧ ಮೇಳಗಳಲ್ಲಿ ಐದು ದಶಕಗಳ ಕಾಲ ಪುಂಡು ವೇಷಧಾರಿಯಾಗಿ, ಸ್ತ್ರೀ ವೇಷಧಾರಿಯಾಗಿ ಕಲಾಸೇವೆ ಗೈದ, ಕಾಡ ಮಲ್ಲಿಗೆ ಪ್ರಸಂಗದಲ್ಲಿ ‘ಮಲ್ಲಿಗೆ’ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇಂದು (07-07-2022) ರಾತ್ರಿ 2.30 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು.

ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಅಭಿಮಾನಿಗಳನ್ನು, ಶಿಷ್ಯರನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗವು ಏಳು ವರ್ಷಗಳ ಹಿಂದೆ ಪ್ರಶಸ್ತಿ ನೀಡಿ ಅವರನ್ನು ಗೌರವಿಸಿತ್ತು.

ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments