ಉಡುಪಿ : 35 ವರ್ಷ ಕರ್ನಾಟಕ ಮೇಳದ ತಿರುಗಾಟವೂ ಸೇರಿದಂತೆ ವಿವಿಧ ಮೇಳಗಳಲ್ಲಿ ಐದು ದಶಕಗಳ ಕಾಲ ಪುಂಡು ವೇಷಧಾರಿಯಾಗಿ, ಸ್ತ್ರೀ ವೇಷಧಾರಿಯಾಗಿ ಕಲಾಸೇವೆ ಗೈದ, ಕಾಡ ಮಲ್ಲಿಗೆ ಪ್ರಸಂಗದಲ್ಲಿ ‘ಮಲ್ಲಿಗೆ’ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇಂದು (07-07-2022) ರಾತ್ರಿ 2.30 ಗಂಟೆಗೆ ಸ್ವಗೃಹದಲ್ಲಿ ನಿಧನರಾದರು.
ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಅಭಿಮಾನಿಗಳನ್ನು, ಶಿಷ್ಯರನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗವು ಏಳು ವರ್ಷಗಳ ಹಿಂದೆ ಪ್ರಶಸ್ತಿ ನೀಡಿ ಅವರನ್ನು ಗೌರವಿಸಿತ್ತು.
ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
