ಹಿರಿಯ ಹಿಮ್ಮೇಳವಾದಕ ಮಿಜಾರು ಮೋಹನ ಶೆಟ್ಟಿಗಾರರು ಕಟೀಲು, ಕರ್ನಾಟಕ ಮೇಳವೂ ಸೇರಿದಂತೆ ಸುದೀರ್ಘ ಐದು ದಶಕಗಳ ಕಲಾ ಸೇವೆಗೈದಿದ್ದು ಈಗ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ.
ವೃತ್ತಿಯಲ್ಲಿರುವಾಗಲೂ ಮಾಡುತ್ತಿದ್ದ ಕುಲಕಸುಬು ನೇಕಾರಿಕೆಯನ್ನು ಈಗಲೂ ಪತಿ-ಪತ್ನಿಯರಿಬ್ಬರೂ ದಿನದ ಒಂದಷ್ಟು ಹೊತ್ತು ಮಾಡುತ್ತಾರೆ.
ಕಟೀಲು ಮೇಳದಲ್ಲಿ ತಾವು ಎಳವೆಯಲ್ಲಿದ್ದಾಗ ಅನುಭವಿಸಿದ ಕರ್ಣಾನಂದಕರ ಹಿಮ್ಮೇಳದ ನೆನಪಿನಲ್ಲಿ ಅತ್ತೂರು ಉಡುಪ ಸಹೋದರ-ಸಹೋದರಿಯರ ಪರವಾಗಿ ರೂ. 20,000/- ನಗದು ಪುರಸ್ಕಾರವೂ ಸೇರಿದಂತೆ ಫಲವಸ್ತು ಅಭಿನಂದನಾ ಪತ್ರದೊಂದಿಗೆ ಶೆಟ್ಟಿಗಾರ್ ದಂಪತಿಗಳನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.
ಕಲಾವಿದ-ಪ್ರೇಕ್ಷಕರ ನಡುವಿನ ಮಧುರ ಸಂಬಂಧಕ್ಕೆ ಇದು ಸಾಕ್ಷಿಯಾಯಿತು. ವೃದ್ಧ ದಂಪತಿಗಳು ತುಂಬಾ ಸಂತೋಷವನ್ನು ಅನುಭವಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ವಿದ್ಯಾಪ್ರಸಾದ, ಪ್ರಥ್ವಿ ಪ್ರಸಾದ ಉಪಸ್ಥಿತರಿದ್ದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

