ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಸೇರಿದಂತೆ ನಾಲ್ಕು ಮಹನೀಯರನ್ನು ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎಲ್ಲರಿಗೂ ಟ್ವಿಟ್ಟರ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಡಾ. ವೀರೇಂದ್ರ ಹೆಗಡೆಯವರಿಗೆ ಪ್ರಧಾನ ಮಂತ್ರಿಯವರು ಕನ್ನಡ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿಯವರು ತನ್ನ ಟ್ವಿಟ್ಟರ್ ಸಂದೇಶದಲ್ಲಿ
“ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. ಖಂಡಿತವಾಗಿ ಅವರು ಸಂಸದೀಯ ನಡಾವಳಿಗಳನ್ನು ಮತ್ತಷ್ಟು ಉತ್ಕೃಷ್ಟ ಗೊಳಿಸುವರು.”
ಎಂದು ಹೇಳಿದ್ದಾರೆ. ಟ್ವಿಟ್ಟರ್ ಸಂದೇಶ ಇಲ್ಲಿದೆ.
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

