Thursday, May 14, 2026
Homeಸುದ್ದಿರಾಜ್ಯಸಭೆಗೆ ಡಾ. ವೀರೇಂದ್ರ ಹೆಗಡೆ ನಾಮನಿರ್ದೇಶನ - ಕನ್ನಡದಲ್ಲಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ರಾಜ್ಯಸಭೆಗೆ ಡಾ. ವೀರೇಂದ್ರ ಹೆಗಡೆ ನಾಮನಿರ್ದೇಶನ – ಕನ್ನಡದಲ್ಲಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಸೇರಿದಂತೆ ನಾಲ್ಕು ಮಹನೀಯರನ್ನು ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಎಲ್ಲರಿಗೂ ಟ್ವಿಟ್ಟರ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಡಾ. ವೀರೇಂದ್ರ ಹೆಗಡೆಯವರಿಗೆ ಪ್ರಧಾನ ಮಂತ್ರಿಯವರು ಕನ್ನಡ ಭಾಷೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿಯವರು ತನ್ನ ಟ್ವಿಟ್ಟರ್ ಸಂದೇಶದಲ್ಲಿ

“ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. ಖಂಡಿತವಾಗಿ ಅವರು ಸಂಸದೀಯ ನಡಾವಳಿಗಳನ್ನು ಮತ್ತಷ್ಟು ಉತ್ಕೃಷ್ಟ ಗೊಳಿಸುವರು.”

ಎಂದು ಹೇಳಿದ್ದಾರೆ. ಟ್ವಿಟ್ಟರ್ ಸಂದೇಶ ಇಲ್ಲಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments