ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಗಾಂಜಾವನ್ನು ವಿತರಿಸುತ್ತಿದ್ದ ಹಾಗೂ ಗಾಂಜಾವನ್ನು ಇಟ್ಟುಕೊಂಡಿದ್ದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರರವರ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರ ತಂಡ ಮಂಗಳೂರಿನ ವೆಲೆನ್ಸಿಯಾ ಸೂಟರ್ ಪೇಟೆ 3ನೇ ಕ್ರಾಸ್ ನ ವಸತಿಗೃಹವೊಂದಕ್ಕೆ ದಾಳಿ ನಡೆಸಿದೆ. ಅಲ್ಲಿ ಇದ್ದ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಹೊಂದಿದ ಆರೋಪದ ಮೇಲೆ 12 ವಿದ್ಯಾರ್ಥಿಗಳನ್ನು ಬಂಧಿಸಿದೆ.
ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದವರು. ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, 11 ಮಂದಿ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಡಿಸಲಾಗಿದೆ. ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿದ್ದು, 3 ಮಂದಿ ವಿದ್ಯಾರ್ಥಿಗಳು ಇಂದಿರಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು.
ಶಾನೂಫ್ ಅಬ್ದುಲ್ ಗಫೂರ್ (21)ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ ಟಿ ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22)

ವಿದ್ಯಾರ್ಥಿಗಳಿಂದ ರೂ. 2,85,000 ಮೌಲ್ಯ ಅಂದಾಜಿನ ಒಟ್ಟು 900 ಗ್ರಾಂ ತೂಕದ ರೂ. 20,000 ಮೌಲ್ಯದ ಗಾಂಜಾ, ಸೇದುವ ಸ್ಮೋಕಿಂಗ್ ಪೈಪ್, ರೋಲಿಂಗ್ ಪೇಪರ್ ಗಳನ್ನು, ರೂ. 4,500, ಮತ್ತು 11 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ scale ವಶಪಡಿಸಿಕೊಳ್ಳಲಾಗಿದೆ.
ಈ ಜಾಲದಲ್ಲಿ ಇನ್ನೂ ಹಲವು ಯುವಕರು, ವಿದ್ಯಾರ್ಥಿಗಳು ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಅವರನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

