ಬಡಗುತಿಟ್ಟಿನ ಹಿರಿಯ ವೇಷಧಾರಿಯಾದ ಮಜ್ಜಿಗೆಬೈಲು ಆನಂದ ಶೆಟ್ಟಿ(78ವರ್ಷ) ದಿನಾಂಕ 10-07-2022ರಂದು ಕುಂದಾಪುರ ತಾಲೂಕಿನ ಯಡಾಡಿಯ ಸ್ವಗೃಹದಲ್ಲಿ ರಾತ್ರಿ 7.37ಕ್ಕೆ ನಿಧನರಾದರು.
ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ ವೇಷಧಾರಿಯಾಗಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪೆರ್ಡೂರು, ಮಾರಣಕಟ್ಟೆ, ಸಾಲಿಗ್ರಾಮ, ಗೋಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳದಲ್ಲಿ ಹೀಗೆ ನಾಲ್ಕು ದಶಕಗಳ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು.
ಯಕ್ಷಗಾನ ಕಲಾರಂಗ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು. ಪತ್ನಿ,ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

