ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕಟೀಲು ಪರಿಸರದಲ್ಲಿ ನೀರು ಆವರಿಸಿಕೊಂಡಿದೆ. ನಂದಿನಿ ನದಿಯು ಉಕ್ಕಿ ಹರಿಯುತ್ತಿದ್ದು ಕಟೀಲು ಜಳಕದ ಕಟ್ಟೆಯ ಬಳಿ ನೀರು ಆವರಿಸಿದೆ.
ಕಟೀಲಿನ ಕಿರು ಸೇತುವೆ ಜಲಾವೃತಗೊಂಡಿದೆ. ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಸುತ್ತಮುತ್ತಲೂ ನಂದಿನಿ ನದಿ ಉಕ್ಕಿ ಹರಿದಿದೆ.
ಜಳಕದ ಕಟ್ಟೆಯ ಬಳಿಯಲ್ಲಿರುವ ಬಡಗ ಎಕ್ಕಾರು ಗ್ರಾಮದ ಕುಕ್ಕುಂಡೇಲು,ಮಚ್ಚಾರು ಪ್ರದೇಶದ ಹಲವಾರು ಕುಟುಂಬಗಳು ಸಂಚಾರಕ್ಕೆ ಕಿರು ಸೇತುವೆಯನ್ನೇ ಅವಲಂಬಿಸಿವೆ.
ಹಾಗಾಗಿ ನೆರೆ ನೀರಿನಿಂದ ಅವರೆಲ್ಲಾ ಭಯಭೀತರಾಗಿದ್ದು ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ.
ಅದೂ ಅಲ್ಲದೆ ನಂದಿನಿ ನದಿಯ ನೆರೆ ನೀರು ಉಕ್ಕಿ ಹರಿಯುತ್ತಿರುವುದರಿಂದ ಆ ನೀರು ತೋಟಕ್ಕೆ ನುಗ್ಗಿ ಅಪಾರ ಕೃಷಿ ನಷ್ಟ ನಾಶಗಳು ಉಂಟಾಗಿವೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

