ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕಟೀಲು ಪರಿಸರದಲ್ಲಿ ನೀರು ಆವರಿಸಿಕೊಂಡಿದೆ. ನಂದಿನಿ ನದಿಯು ಉಕ್ಕಿ ಹರಿಯುತ್ತಿದ್ದು ಕಟೀಲು ಜಳಕದ ಕಟ್ಟೆಯ ಬಳಿ ನೀರು ಆವರಿಸಿದೆ.
ಕಟೀಲಿನ ಕಿರು ಸೇತುವೆ ಜಲಾವೃತಗೊಂಡಿದೆ. ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಸುತ್ತಮುತ್ತಲೂ ನಂದಿನಿ ನದಿ ಉಕ್ಕಿ ಹರಿದಿದೆ.
ಜಳಕದ ಕಟ್ಟೆಯ ಬಳಿಯಲ್ಲಿರುವ ಬಡಗ ಎಕ್ಕಾರು ಗ್ರಾಮದ ಕುಕ್ಕುಂಡೇಲು,ಮಚ್ಚಾರು ಪ್ರದೇಶದ ಹಲವಾರು ಕುಟುಂಬಗಳು ಸಂಚಾರಕ್ಕೆ ಕಿರು ಸೇತುವೆಯನ್ನೇ ಅವಲಂಬಿಸಿವೆ.
ಹಾಗಾಗಿ ನೆರೆ ನೀರಿನಿಂದ ಅವರೆಲ್ಲಾ ಭಯಭೀತರಾಗಿದ್ದು ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ.
ಅದೂ ಅಲ್ಲದೆ ನಂದಿನಿ ನದಿಯ ನೆರೆ ನೀರು ಉಕ್ಕಿ ಹರಿಯುತ್ತಿರುವುದರಿಂದ ಆ ನೀರು ತೋಟಕ್ಕೆ ನುಗ್ಗಿ ಅಪಾರ ಕೃಷಿ ನಷ್ಟ ನಾಶಗಳು ಉಂಟಾಗಿವೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

