ಕಾಣಿಯೂರು ಸಮೀಪದ ಬೈತಡ್ಕ ಗೌರಿಹೊಳೆ ದುರಂತದ ಬಗೆಗಿನ ಎಲ್ಲಾ ಊಹಾಪೋಹಗಳಿಗೂ ಈಗ ತೆರೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಪತ್ತೆಯಾಗುವುದರ ಜೊತೆಗೆ ತನಿಖೆಯ ದಾರಿ ತಪ್ಪಿಸುವಂತೆ ಕಾಣಿಸುತ್ತಿದ್ದ ಹೇಳಿಕೆಗಳು ಸತ್ವವನ್ನು ಕಳೆದುಕೊಂಡಿದೆ.
ಇಬ್ಬರಲ್ಲಿ ಓರವನ ಮೃತದೇಹ ಇಂದು ಬೆಳಗ್ಗೆ 8 ಘಂಟೆಗೆ ಪತ್ತೆಯಾಗಿದೆ. ಬೈತಡ್ಕ ಗೌರಿಹೊಳೆ ಸೇತುವೆಯಿಂದ ಸುಮಾರು 500 ಮೀಟರ್ ದೂರದಲ್ಲಿ ಹೊಳೆಗೆ ಬಿದ್ದಿದ್ದ ಭಾರೀ ಗಾತ್ರದ ಮರವೊಂದರಲ್ಲಿ ಸಿಕ್ಕಿಹಾಕಿಕೊಂಡ ರೀತಿಯಲ್ಲಿ ಪತ್ತೆಯಾದ ಮೃತದೇಹ ಇಬ್ಬರಲ್ಲಿ ಯಾರದೆಂದು ಗುರುತುಹಿಡಿದ ನಂತರವೇ ತಿಳಿಯಬಹುದಾಗಿದೆ.
ನಿನ್ನೆಯ ವರೆಗೆ ಹೋಳೆ ತುಂಬಿ ಹರಿಯುತ್ತಿದ್ದುದರಿಂದ ಆ ಮರದ ದಿಮ್ಮಿ ಕಾಣಿಸುತ್ತಿರಲಿಲ್ಲ. ಇಂದು ಮಳೆಯ ಜೊತೆಗೆ ಹೊಳೆಯ ನೀರಿನ ಮಟ್ಟವೂ ಕಡಿಮೆಯಾಗಿದೆ. ಆದ್ದರಿಂದ ಆ ಮರದ ದಿಮ್ಮಿಯಲ್ಲಿ ನೇತಾಡುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಮರಕ್ಕಡದ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹರಿಯುತ್ತಿದ್ದ ಹೊಳೆಯಲ್ಲಿ ಇದ್ದ ಮರದ ಕೊಂಬೆಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸ್ ಇಲಾಖೆಯವರು ಆಗಮಿಸಿದ್ದು ಮೃತದೇಹವನ್ನು ಮೇಲೆತ್ತಿ ಶವಪರೀಕ್ಷೆಗೆ ಕಳುಹಿಸುವ ಕಾರ್ಯ ಇನ್ನಷ್ಟೇ ಆಗಬೇಕಾಗಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

