ಪರಮಪೂಜ್ಯ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಎಡನೀರು ಮಠದಲ್ಲಿ ನಡೆಯಲಿವೆ.
ಚಾತುರ್ಮಾಸ್ಯ ವ್ರತಾಚರಣೆಯು ದಿನಾಂಕ 13.07.2022ರಿಂದ 10.09.2022ರ ವರೆಗೆ ನಡೆಯಲಿದೆ. ನಾಳೆ ದಿನಾಂಕ 13.07.2022 ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಅಪರಾಹ್ನ 2 ಘಂಟೆಗೆ ಸಭಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ.
3 ಘಂಟೆಗೆ ಸರಿಯಾಗಿ ಹನುಮಗಿರಿ ಮೇಳದವರಿಂದ ಕೃಷ್ಣಲೀಲೆ, ಕರ್ಣಪರ್ವ, ಗದಾಪರ್ವ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.