ಅಖಿಲ ಭಾರತ ಚೆಸ್ ಫೆಡರೇಷನ್ ಮತ್ತು ಭಾರತ ಕ್ರೀಡಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಜುಲೈತಿಂಗಳ 1ರಿಂದ 9ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆದ 17ರ ಒಳಗಿನ ವಯೋಮಾನದ 32ನೇ ರಾಷ್ಟ್ರೀಯ ಚೆಸ್ ಟೂರ್ನಿಯಲ್ಲಿ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಧನುಷ್ ರಾಮ್. ಎಂ( ಶ್ರೀದಿನೇಶ್ ಪ್ರಸನ್ನ ಮತ್ತು ಶ್ರೀಮತಿ ಉಮಾ.ಡಿ. ಪ್ರಸನ್ನ ಇವರಪುತ್ರ) ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ
ಮುಕ್ತ ವಿಭಾಗದಲ್ಲಿ ನಗದು ಪುರಸ್ಕಾರದೊಂದಿಗೆ 12ನೇ ಸ್ಥಾನ ಪಡೆದಿದ್ದಾರೆ ಹಾಗೂ ಒಟ್ಟು ಸುಮಾರು 120 ಸ್ಪರ್ಧಿಗಳು ಇದರಲ್ಲಿ ಭಾಗವಹಿಸಿದ್ದರು ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.